ಹೊನ್ನಾವರ ; ೮೦ರ ದಶಕದಲ್ಲಿ ಹತ್ತಾರು ವರ್ಷಗಳ ಕಾಲ ಹೊನ್ನಾವರ ಬ್ಲಾಕ್ ಕಾಂಗ್ರೆಸನ್ನು ಸಮರ್ಥವಾಗಿ ಮುನ್ನಡೆಸಿದ, ಮಾಜಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಕರ್ಕಿ ಮಂಡಲ ಪಂಚಾಯತನ ಪ್ರಥಮ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ರಾಮೇಶ್ವರಕಂಬಿಯ ಶ್ರೀ ರಾಮನಾಥ ನಾಯ್ಕ ಇಂದು ನಸುಕಿನ ಜಾವ ತಮ್ಮ ೮೦ರ ವಯಸ್ಸಿನಲ್ಲಿ ನಮ್ಮೇಲ್ಲರಿಂದ ಮರೆಯಾದರು.
ಕೆಲ ತಿಂಗಳ ಹಿಂದೆ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು, ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡು ಮಾನಸಿಕವಾಗಿ ನೊಂದಿದ್ದರು. ಆದರೂ ಈ ಇಳಿ ವಯಸ್ಸಿನಲ್ಲೂ ಕ್ರಿಯಾಶೀಲವಾಗಿ ಕಾರ್ಯಚಟುವಟಿಕೆಯಲ್ಲಿದ್ದರು,
ರಾಮನಾಥ ನಾಯ್ಕ,ಪತ್ನಿ, ನಾಲ್ಕು ಗಂಡು, ಓರ್ವ ಹೆಣ್ಣು ಮಗಳು ಮತ್ತು ಅಪಾರ ಬಂಧು ಬಳಗವನ್ನು ಬಿಟ್ಟು ಬಾರದ ಲೋಕಕ್ಕೆ ತೆರಳಿದ್ದಾರೆ.
ಅವರ ದಿವ್ಯಾತ್ಮಕ್ಕೆ ಪರಮಾತ್ಮ ಚಿರಶಾಂತಿ ನೀಡಲಿ ಎಂದು ಜಗದೀಪ ಎನ್. ತೆಂಗೇರಿ ಅಧ್ಯಕ್ಷರು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಉತ್ತರ ಕನ್ನಡ ಜಿಲ್ಲೆ ಇವರು ಪ್ರಾರ್ಥಿಸಿದ್ದಾರೆ.
ಹೆಚ್ಚಿನ ಮಾಹಿತಿ ಹಾಗೂ ಸುದ್ದಿ ವಿವರಕ್ಕೆ ಹಾಗೂ ವಿಡಿಯೊ ನ್ಯೂಸ್ ವೀಕ್ಷಿಸಲು ಭಾವನ ಟಿವಿ ವೀಕ್ಷಿಸಿ. ಭಾವನ ಟಿವಿ ಇದು ನಿಮ್ಮ ವಾಹಿನಿ.
ಭಾವನಾ ಟಿವಿಯಲ್ಲಿ ಮತ್ತು ವೆಬ್ ಸೈಟ್ನಲ್ಲಿ ಜಾಹಿರಾತು ನೀಡಲು ಕರೆ ಮಾಡಿ, 9740723670, 9590906499
More Stories
ನಾನು ಮಾಡಿದಷ್ಟು ಅಭಿವೃದ್ಧಿ ಕನಸಿನಲ್ಲೂ ಕಾಗೇರಿ ಮಾಡಿಲ್ಲ: ದೇಶಪಾಂಡೆ
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ