ಭಟ್ಕಳ: ಗೋವಾದಲ್ಲಿ ನಡೆದ ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯ ಕಿಕ್ ಬಾಕ್ಸಿಂಗ್ ತಂಡದಿoದ ಭಾಗವಹಿಸಿದ್ದ ಭಟ್ಕಳದ ನಾಗಶ್ರೀ ವಿ.ನಾಯ್ಕ ಬೆಳ್ಳಿ ಹಾಗೂ ಕಂಚಿನ ಪದಕ ಪಡೆದು ಜಿಲ್ಲೆಗೆ ಹೆಮ್ಮೆ ತಂದಿದ್ದಾಳೆ.
ಕಳೆದ ಬಾರಿ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಭಟ್ಕಳದ ಶೋಟೊಕಾನ್ ಕರಾಟೆ ಇನ್ಸಿಟ್ಯೂಟ್ನ ವಿದ್ಯಾರ್ಥಿನಿ ನಾಗಶ್ರೀ ನಾಯ್ಕ ಚಿನ್ನದ ಪದಕ ಗೆದ್ದು, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಳು.
ಆಗಸ್ಟ್ ೨೬ರಿಂದ ೨೯ರ ತನಕ ಗೋವಾದಲ್ಲಿ ನಡೆದ ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ದೇಶದ ಎಲ್ಲಾ ರಾಜ್ಯದಿಂದ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಕಿಕ್ ಬಾಕ್ಸಿಂಗ್ ಪಟುಗಳು ಭಾಗವಹಿಸಿದ್ದರು.
ಕರ್ನಾಟಕ ರಾಜ್ಯ ಕಿಕ್ ಬಾಕ್ಸಿಂಗ್ ತಂಡದಿAದ ಭಾಗವಹಿಸಿದ್ದ ಭಟ್ಕಳದ ನಾಗಶ್ರೀ ವಿ.ನಾಯ್ಕ ಪಾಯಿಂಟ್ ಫೈಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದು, ಕ್ರಿಯೇಟಿವ್ ಫಾಮ್ ವೆಫನ್ ವಿಭಾಗದಲ್ಲಿ ಕಡಿಮೆ ಅಂತರದ ಪಾಯಿಂಟ್ನಲ್ಲಿ ಸೋತು ಚಿನ್ನದ ಪದಕದಿಂದ ವಂಚಿತರಾಗಿ ಬೆಳ್ಳಿ ಪದಕ ಪಡೆದುಕೊಳ್ಳುವುದರೊಂದಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಆಡುವ ಅವಕಾಶದಿಂದ ವಂಚಿತಳಾಗಿದ್ದಾಳೆ.
ಈಕೆಯ ಸಾಧನೆಗೆ ಉತ್ತರಕನ್ನಡ ಜಿಲ್ಲಾ ಕರಾಟೆ ಸ್ಪೋರ್ಟ್ಸ್ ಅಸೋಸಿಯೇಷನ್, ಭಟ್ಕಳ ಶೋಟೊಕಾನ್ ಕರಾಟೆ ಇನ್ಸಿಟ್ಯೂಟ್ ಹಾಗೂ ತಾಲೂಕಿನ ಜನತೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
More Stories
ಹೊಳೆಯಲ್ಲಿ ಆಕಸ್ಮಿಕವಾಗಿ ಮುಳುಗಿ ಇಬ್ಬರ ಸಾವು.
ಮೊಬೈಲ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಲಕ್ಷಾಂತರ ಹಣ ಕ್ಷಣಾರ್ಧದಲ್ಲಿ ಮಾಯ,
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು: