ಭಟ್ಕಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ೭೧ನೇ ಜನ್ಮದಿನದ ಪ್ರಯುಕ್ತ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿನ ಒಳರೋಗಿಗಳಾಗಿ ದಾಖಲಾಗಿರುವ ಅನಾರೋಗ್ಯ ಪೀಡಿತರಿಗೆ ಹಣ್ಣು ಹಂಪಲ ವಿತರಣಾ ಕಾರ್ಯಕ್ರಮವು ಶುಕ್ರವಾರದಂದು ಭಟ್ಕಳ ಬಿಜೆಪಿ ಮಂಡಲದಿAದ ವಿತರಿಸಿದರು.
ಭಟ್ಕಳ ಬಿಜೆಪಿ ಮಂಡಲಾಧ್ಯಕ್ಷ ಸುಬ್ರಾಯ ದೇವಾಡಿಗ ಮಾತನಾಡಿ ‘ ಪ್ರಧಾನಿ ಮೋದಿ ಅವರ ಇಂದಿನ ಹುಟ್ಟು ಹಬ್ಬದ ದಿನದಿಂದ ಅಕ್ಟೋಬರ್ ೭ ರ ತನಕ ೨೦ ದಿನಗಳ ಕಾಲ ವಿನೂತನ ರೀತಿಯಲ್ಲಿ ಸಾಮಾಜಿಕ ಕಾರ್ಯದ ಜೊತೆಗೆ ಪಕ್ಷದ ಪ್ರಚಾರದ ಕಾರ್ಯಕ್ರಮವನ್ನು ನಡೆಸಲು ತೀರ್ಮಾನಿಸಲಾಗಿದೆ. ಅಕ್ಟೋಬರ್ ೭ ಪ್ರಧಾನಿ ಮೋದಿ ಅವರು ಸಕ್ರಿಯ ರಾಜಕಾರಣಕ್ಕೆ ಬಂದು ೨೦ ವರ್ಷ ಆಗಲಿದೆ. ಈ ಹಿನ್ನೆಲೆ ಪಕ್ಷದಿಂದ ನಡೆಯುವ ಸೇವೆ ಮತ್ತು ಸಮರ್ಪಣಾ ಅಭಿಯಾನದಡಿಯಲ್ಲಿ ವಿವಿಧ ಕಾರ್ಯಕ್ರಮವನ್ನು ಬೂತ ಮಟ್ಟದಿಂದ ಮಂಡಲದ ವರೆಗೆ ನಡೆಸಲಿದ್ದೇವೆ. ಮೊದಲ ಹಂತವಾಗಿ ಸರಕಾರಿ ಆಸ್ಪತ್ರೆಯಲ್ಲಿನ ೭೦ಕ್ಕೂ ಅಧಿಕ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ್ದೇವೆ. ಪಕ್ಷದ ವತಿಯಿಂದ, ಕಾರ್ಯಕರ್ತರಿಂದ ಹುಟ್ಟು ಹಬ್ಬದ ಶುಭಾಶಯ ಕೋರುವುದರ ಜೊತೆಗೆ ಅವರಿಗೆ ದೇವರು ಆಯುಷ್ಯ ಆರೋಗ್ಯ ನೀಡಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್, ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.
More Stories
ಕುಂದಾಪುರದಲ್ಲಿ ನಡೆದ ಸಾವಿಷ್ಕಾರ್ ಫೆಸ್ಟ್ ನಲ್ಲಿ ಉತ್ತಮ ಹೆಸರು ಗಳಿಸಿದ ಅಂಜುಮನ್ ಇಂಜಿನಿಯರಿ0ಗ್ ವಿದ್ಯಾರ್ಥಿಗಳು
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ