ಹೊನ್ನಾವರ ; ಬಿಜೆಪಿ ಹಿರಿಯ ನಾಯಕರಾದ ಡಾ|| ಎಂ ಪಿ ಕರ್ಕಿಯವರು ಕುಮಟಾ ಹೊನ್ನಾವರ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿದಿಸಿ ಶಾಸಕರಾಗಿ ಜನಮನ್ನಣೆ ಗಳಿಸಿದ್ದರು,. ಇವರು ಬಿಜೆಪಿಯ ಜಿಲ್ಲಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಒಮ್ಮೆ ಲೋಕಸಭಾ ಕ್ಷೇತ್ರಕ್ಕೂ ಡಾ|| ಎಂ ಪಿ ಕರ್ಕಿ ಪ್ರತಿನಿದಿಸಿದ್ದರು, ಹೊನ್ನಾವರದ ಪ್ರತಿಷ್ಟಿತ ವಿದ್ಯಾ ಸಂಸ್ಥೆ ಎಮ್ ಪಿ ಈ ಸೊಸೈಟಿಯ ಅಧ್ಯಕ್ಷರಾಗಿಯು ಕಾರ್ಯರ್ವಹಿಸುತ್ತಿದ್ದರು. ಅಪ್ಪಟ ಹಿಂದುತ್ವವಾಧಿಯಾಗಿ ಬಿಜೆಪಿ ಸಂಘಟಿಸಿದ ನಾಯಕರಾಗಿದ್ದರೂ. ಇವರು ಇಂದು ಸೋಮವಾರ ಸೆಂಟ್ ಇಗ್ನೇಷಿಯಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಅಪಾರ ಬಂದುಗಳು ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ.
ಇಂದು ನಿಧನರಾದ ಕುಮಟಾ ಹೊನ್ನಾವರ ಕ್ಷೇತ್ರದ ಮಾಜಿ ಶಾಸಕರಾದ ಡಾ. ಎಂ.ಪಿ. ಕರ್ಕಿಯವರ ಅಂತಿಮ ದರ್ಶನವನ್ನು ಎಸ್.ಡಿ.ಎಂ. ಕಾಲೇಜಿನ ಆವರಣದಲ್ಲಿ ಮಂಗಳವಾರ ಬೆಳಿಗ್ಗೆ ೮ ಗಂಟೆಯಿAದ ೧೦ ಗಂಟೆಯವರೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಹಿತೈಷಿಗಳು, ವಿವಿಧ ಕ್ಷೇತ್ರದ ಗಣ್ಯರು, ಬಿಜೆಪಿ ಕಾರ್ಯಕರ್ತರಿಗೆ, ಹಾಗೂ ಸಾರ್ವಜನಿಕರಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಎಂದು ರಾಜೇಶ ಭಂಡಾರಿ ಬಿಜೆಪಿ ತಾಲೂಕ ಅಧ್ಯಕ್ಷ ಹೊನ್ನಾವರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.
ಸಮುದ್ರ ಕಿನಾರೆಯಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಬಾಲಕರು ನೀರು
ಮತದಾರರ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮುಂಬತ್ತಿ ಪ್ರಜ್ವಲನೆ ಕಾರ್ಯಕ್ರಮ