May 4, 2024

Bhavana Tv

Its Your Channel

ಅತೀ ದೊಡ್ಡ ಸಾಧನೆಯನ್ನು ಮಾಡಲು ಹೊರಟ ನಾಗಪುರದ ಯುವಕ ರೋಹನ್ ಅಗರ್‌ವಾಲ್.

ಭಟ್ಕಳ: ಕೆಲವೊಂದು ಸಾಧನೆ ಮಾಡಲು ಹಣ, ಅಂತಸ್ತು, ವಯಸ್ಸು ಕೂಡಾ ಮುಖ್ಯವಾಗುತ್ತದೆ. ಆದರೆ ಅದ್ಯಾವುದೂ ಇಲ್ಲದೇ ಅತೀ ದೊಡ್ಡ ಸಾಧನೆಯನ್ನು ಮಾಡಲು ಹೊರಟ ಯುವಕ ಮಹಾರಾಷ್ಟ್ರದ ನಾಗಪುರದ ಯುವಕ ರೋಹನ್ ಅಗರ್‌ವಾಲ್.

ಈತ ತನ್ನ ಬಿ.ಕಾಂ. ಎರಡನೇ ವರ್ಷಕ್ಕೆ ಕಾಲೇಜಿನಿಂದ ಹೊರ ಬಂದು ಸಮಾಜಕ್ಕಾಗಿ ಏನನ್ನಾದರೂ ಮಾಡಬೇಕು ಎನ್ನುವ ಹಂಬಲದೊAದಿಗೆ ಬರೀಗೈಯಲ್ಲಿ ಕಾಲ್ನಡಿಗೆಯನ್ನು ಪ್ರಪಂಚ ಸುತ್ತಲು ಹೊರಟು ನಿಂತಾದ ಈತನ ಪಾಲಕರಿಗೆ ಉಸಿರೇ ನಿಂತAತಾಗಿತ್ತು. ಆದರೂ ಸಾವರಿಸಿಕೊಂಡು ಮಗನ ಹಠಸಾಧನೆಗೆ ಒಪ್ಪಿಗೆ ನೀಡುವ ಮೂಲಕ ಸಾತ್ ನೀಡಿದ್ದಾರೆ ತಂದೆ ಹಾಗೂ ತಾಯಿ. ಉಡುಪಿ ಜಿಲ್ಲೆಯ ಮೂಲಕ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಲುಪಿದ ಈತನಿಗೆ ಇಲ್ಲಿನ ಶಂಶುದ್ಧೀನ್ ಸರ್ಕಲ್‌ನಲ್ಲಿ ಭವ್ಯ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ತಂಜೀA ಮುಖಂಡ ಇನಾಯತುಲ್ಲಾ ಶಾಬಂದ್ರಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ, ಭಟ್ಕಳ ನಗರ ಠಾಣೆಯ ಇನ್ಸಪೆಕ್ಟರ್ ದಿವಾಕರ ಪಿ.ಎಂ., ಸಬ್ ಇನ್ಸಪೆಕ್ಟರ್ ಹೆಚ್.ಬಿ. ಕುಡಗುಂಟಿ, ಕರ್ನಾಟಕ ರಕ್ಷಣಾ ವೇದಿಕೆಯ ಕೃಷ್ಣ ಗೌಡ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಮುಬಾಶಿರ್ ಹಲ್ಲಾರೆ ಅವರು ಎಲ್ಲರಿಗೂ ಪರಿಚಯಿಸಿ ನಂತರ ಅವರಿಗೆ ಊಟೋಪಚಾರ ಮಾಡಿಸಿ ಕಳುಹಿಸಿದರು.
ಕಳೆದ ೨೦೨೦ನೇ ಇಸವಿಯ ಅಗಸ್ಟ್ ೨೫ರಂದು ವಾರಣಾಸಿಯ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿ ಹೊರಟ ಯುವಕ ರೋಹನ್ ಅಗರ್‌ವಾಲ್‌ನ ಗುರಿಯೊಂದೇ ದೇಶದಲ್ಲಿ ಈ ಹಿಂದೆ ಇದ್ದ ಗುರುಕುಲ ಪದ್ಧತಿಯ ಶಿಕ್ಷಣ ಜ್ಯಾರಿಗೆ ಬರಬೇಕು. ಪ್ಲಾಸ್ಟಿಕ್‌ನಿಂದಾಗುವ ಪರಿಸರ ನಾಶವನ್ನು ತಡೆಯಬೇಕು ಎನ್ನುವ ಗುರಿಯೊಂದಿಗೆ ಹೊರಟ ಯುವಕನ ಇನ್ನೊಂದು ಗುರಿ ಮೈ ನಡುಗಿಸುವಂತಾದ್ದು. ಒಟ್ಟಾರೆ ಈತ ಕಾಲ್ನಡಿಗೆಯಲ್ಲಿಯೇ ಸೈಬೀರಿಯಾವನ್ನು ತಲುಪಿ ಅತ್ಯಂತ ಶೀಥ ವಲಯವಾದ ಓಯ್‌ಮ್ಯಾಕೋನ್‌ನ್ನು ತಲುಪುವುದು ಇವನ ಗುರಿಯಾಗಿದೆ.
ಕಾಲ್ನಡಿಗೆಯಲ್ಲಿಯೇ ಈಗಾಗಲೇ ರಾಜಸ್ಥಾನ, ಹರ್ಯಾನ, ದೆಹಲಿ, ಉತ್ತಾಖಂಡ, ಹಿಮಾಚಲ, ಚಂಡೀಘಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು, ಪಾಂಡಿಚೇರಿ, ಕೇರಳವನ್ನು ಕ್ರಮಿಸಿರುವ ಈತ ಮಂಗಳೂರು ಮೂಲಕ ಕರ್ನಾಟಕವನ್ನು ಪ್ರವೇಶಿಸಿದ್ದು ಉತ್ತರ ಕನ್ನಡ ಜಿಲ್ಲೆಯನ್ನು ಅ.೧೯ರಂದು ಮಧ್ಯಾಹ್ನ ತಲುಪಿದ್ದಾನೆ. ಇಲ್ಲಿ ಗೋವಾ ಮೂಲಕ ತನ್ನ ಕಾಲ್ನಡಿಗೆಯನ್ನು ಮುಂದುವರಿಸುವ ಗುರಿಯನ್ನು ಹೊಂದಿದ್ದ ಈತ ದಿನಾಲೂ ೨೦-೩೦ ಕಿ.ಮಿ. ದೂರ ಕ್ರಮಿಸುತ್ತಾನೆ. ಸೈಬೀರಿಯಾ ತಲುಪಲು ಇನ್ನೂ ೧೦ ವರ್ಷಗಳು ಬೇಕು ಎನ್ನುವ ೧೯ರ ಹರೆಯದ ರಹೋನ್ ಮುಖದಲ್ಲಿ ಎನೋ ಸಾಧನೆ ಮಾಡಿದ ಭಾವ ಮೂಡುತ್ತದೆ. ಒಟ್ಟಾರೆ ಛಲದಿಂದ ಹೊರಟ ಈತನ ಯಾತ್ರೆ ಕಳೆದ ಒಂದು ವರ್ಷದಿಂದ ಸುಗಮವಾಗಿ ಸಾಗುತ್ತಿದ್ದು ತಾನು ಭೇಟಿ ನೀಡಿದ ಪ್ರದೇಶದಲ್ಲೆಲ್ಲಾ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಳ್ಳುತ್ತಿದ್ದಾರೆ. ನನಗೆ ಹಣದ ಅವಶ್ಯಕತೆ ಇಲ್ಲ, ಜನರು ಊಟ, ತಿಂಡಿ ವಸತಿ ವ್ಯವಸ್ಥೆಯನ್ನು ಮಾಡುತ್ತಾರೆ, ಯಾರಲ್ಲಿಯೂ ಏನನ್ನು ಕೇಳುವುದಿಲ್ಲ ಎನ್ನುವ ಈತ ನೀಡಿದ್ದನ್ನು ಸ್ವೀಕರಿಸುತ್ತೇನೆ ಎನ್ನುತ್ತಾರೆ. ಒಟ್ಟಾರೆ ೧೮ನೇ ವರ್ಷಕ್ಕೆ ಪ್ರಪಂಚ ಪರ್ಯಟನೆಗೆ ಹೊರಟ ಈತನ ಯಾತ್ರೆ ಸುಗಮವಾಗಿ ಸಾಗಲಿ ಎನ್ನುವ ಹಾರೈಕೆಯೊಂದಿಗೆ ಬೀಳ್ಕೊಡಲಾಯಿತು.

.

error: