ಭಟ್ಕಳ: ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಚುನಾವಣೆಯಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಮಂಗಳವಾರದAದು ಭಟ್ಕಳ ಬಿಜೆಪಿ ಘಟಕದ ವತಿಯಿಂದ ಸಂಶುದ್ದೀನ್ ಸರ್ಕಲನಲ್ಲಿ ವಿಜಯೋತ್ಸವ ಆಚರಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಬಿಜೆಪಿ ಮಂಡಲಾಧ್ಯಕ್ಷ ಸುಬ್ರಾಯ ದೇವಾಡಿಗ ಮಾತನಾಡಿ ‘ ಸಾಕಷ್ಟು ವರ್ಷದ ನಂತರ ಮೊದಲ ಬಿಜೆಪಿ ಅಭ್ಯರ್ಥಿ ವಿಧಾನ ಪರಿಷತ್ ಚುನಾವಣೆಯಲ್ಲಿ ಅಭೂತಪೂರ್ವವಾಗಿ ಜಯಗಳಿಸಿದ್ದು, ತಾಲೂಕೂ ಬಿಜೆಪಿ ಘಟಕ ಹಾಗೂ ಮುಖಂಡ ಕಾರ್ಯಕರ್ತರಿಗೆ ಸಂತಸ ತಂದಿದೆ. ಈ ಮೂಲಕ ಬಿಜೆಪಿ ಜಯಭೇರಿಗೆ ಗಣಪತಿ ಉಳ್ವೇಕರ ಅವರು ಕಾರಣರಾಗಿದ್ದಾರೆ. ಈ ಗೆಲುವಿಗೆ ಕಾರಣರಾದಂತಹ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, ಜಿಲ್ಲೆಯ ಎಲ್ಲಾ ಶಾಸಕರು, ಬಿಜೆಪಿ ಜಿಲ್ಲಾ ಅಧ್ಯಕ್ಷ ವೆಂಕಟೇಶ ನಾಯಕ ಹಾಗೂ ಜಿಲ್ಲೆ ತಾಲೂಕಿನ ಎಲ್ಲಾ ಹಿರಿ ಕಿರಿಯ ಮುಖಂಡರು, ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಸುಬ್ರಾಯ ದೇವಾಡಿಗ, ಪ್ರಧಾನ ಕಾರ್ಯದರ್ಶಿಗಳಾದ ಮೋಹನ ಕೆ. ನಾಯ್ಕ, ಭಾಸ್ಕರ ದೈಮನೆ, ಮಾಜಿ ಅಧ್ಯಕ್ಷ ರಾಜೇಶ ನಾಯ್ಕ, ಯುವ ಮೋರ್ಚಾ ಅಧ್ಯಕ್ಷ ಮಹೇಂದ್ರ ನಾಯ್ಕ, ಪ್ರಮೋದ ಜೋಶಿ,
ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಸಂತೋಷ ನಾಯ್ಕ, ಮಾಜಿ ಸೈನಿಕ ಪ್ರಕೋಷ್ಠ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ಕಾನೂನು ಪ್ರಕೋಷ್ಠ ಸುರೇಶ ನಾಯ್ಕ ಹಾಗೂ ನೂರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.
More Stories
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು:
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ ೪೧ ನೇ ವಾರ್ಷಿಕ ಅಥ್ಲೆಟಿಕ್ ಮೀಟ್
ಸಿದ್ದಾರ್ಥ ಆಂಗ್ಲ ಮಾದ್ಯಮ ಪ್ರೌಢಶಾಲೆ ಶಿರಾಲಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಉತ್ತಮ ಸಾಧನೆ