March 29, 2024

Bhavana Tv

Its Your Channel

ಅಳ್ವೆಕೋಡಿಯಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

ಭಟ್ಕಳ: ಅಳ್ವೆಕೋಡಿಯಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆಯನ್ನು ಭಟ್ಕಳ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಚಂದ್ರಹಾಸ ಬಿ. ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಶಿಕ್ಷಕಿ ರಾಜೀವಿ ಅವರು ಮಕ್ಕಳ ಶಿಕ್ಷಣದಲ್ಲಿ ತಾಯಂದಿರ ಪಾತ್ರ ಏನು ಎನ್ನುವ ಕುರಿತು ವಿವರವಾಗಿ ತಿಳಿಸುತ್ತಾ ಮಕ್ಕಳಿಗೆ ಮನೆಯಲ್ಲಿಯೇ ಶಿಸ್ತು, ಸಂಯಮ ಕಲಿಸುವಂತಾಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವಹಿಸಿದ್ದರು.
ಸೇವಾ ಪ್ರತಿನಿಧಿ ಜಯಾ ಸ್ವಾಗತಿಸಿದರು, ಮೇಲ್ವಿಚಾರಕಿ ರೇಷ್ಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಜ್ಞಾನ ವಿಕಾಸ ಸಮಯನ್ವಯಾಧಿಕಾರಿ ವಿನೋದಾ ಬಾಲಚಂದ್ರ ನಿರೂಪಿಸಿದರು

.

error: