May 6, 2024

Bhavana Tv

Its Your Channel

ಕಾರು ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಸಾವು

ಭಟ್ಕಳ ತಾಲೂಕಿನ ತೆರ್ನಮಕ್ಕಿ ಸಭಾತಿ ಕ್ರಾಸ್ ನಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿದ್ದು ಬೈಕ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪಿರುವ ಘಟನೆ ನಡೆದಿದೆ

ಮೃತ ವ್ಯಕ್ತಿಯನ್ನು ಜೋಸೆಫ್ ಪ್ರಾನ್ಸಿಸ್ ಲೂಯಿಸ್ ಎಂದು ತಿಳಿದು ಬಂದಿದೆ. ಈತನು ಲಾರೆನ್ಸ್ ಕ್ಲೇಮೆಂಟ್ ಗೋನ್ಸಾಲಿಸ್ ಎಂಬಾತನ ಬೈಕ್ ಹಿಂಬದಿಯಲ್ಲಿ ಕುಳಿತು ತೆರ್ನಮಕ್ಕಿ ಕಡೆಯಿಂದ ಸಭಾತಿ ಕ್ರಾಸನಲ್ಲಿ ಚರ್ಚ್ ಪೆಸ್ತ್ ಕಾರ್ಯಕ್ರಮಕ್ಕೆ ಹೋಗುತ್ತಿರುವ ವೇಳೆ ಭಟ್ಕಳ ಕಡೆಯಿಂದ ಹೊನ್ನಾವರದ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ಬಂದು ಮುಂದೆ ಹೋಗುತ್ತಿದ್ದ ಬೈಕ್‌ಗೆ ಹಿಂಬದಿಗೆ ಡಿಕ್ಕಿ ಹೊಡೆದು ಅಪಘಾತವಾಗಿದೆ.

ಅಪಘಾತದಲ್ಲಿ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದು. ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ

error: