May 16, 2024

Bhavana Tv

Its Your Channel

ಭಟ್ಕಳ ಕೋಣಾರದಲ್ಲಿ ೮ ಅಡಿ ಆಳದ ಬಾವಿಯಲ್ಲಿ ಬಿದ್ದ ಹಸು; ಹಸುವನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು

ಭಟ್ಕಳ ಕೋಣಾರದಲ್ಲಿ ೮ ಅಡಿ ಆಳದ ನೀರು ಇರುವ ಬಾವಿಯಲ್ಲಿ ಬಿದ್ದ ಹಸುವನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕೋಣಾರದ ರಾಧಾಕೃಷ್ಣ ಉಪಾಧ್ಯಾಯ ರವರ ಹಸು ನೆಲಸಮದ ಬಾವಿಯಲ್ಲಿ ಬಿದ್ದು ನರಳಾಡುತ್ತಿರುದನ್ನು ಅರಿತು. ಅಗ್ನಿಶಾಮಕ ಸಿಬ್ಬಂದಿಗಳಿಗೆ ಕರೆ ಮಾಡಿ ಹಸುವಿನ ರಕ್ಷಣೆಗೆ ಮನವಿ ಮಾಡಿದ್ದರು. ಈ ಸಂದರ್ಭದಲ್ಲ ಕಾರ್ಯಪ್ರವೃತ್ತರಾದ ಭಟ್ಕಳ ಅಗ್ನಿಶಾಮಕ ದಳದ ಅಧಿಕಾರಿ ರಮೇಶ ಶೆಟ್ಟಿ ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ತಮ್ಮ ರಕ್ಷಣಾ ಸಾಧನದೊಂದಿಗೆ ಬಾವಿಗೆ ಇಳಿದು ಸತತ ೧ ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಹಸುವನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದ್ದಾರೆ.

error: