ಭಟ್ಕಳ: ಚಲಿಸುತ್ತಿದ್ದ ಮೋಟಾರ್ ಬೈಕ್ ಹಾಗೂ ಎಕ್ಟಿವ್ ಹೊಂಡಾ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ನಡೆದ ಪರಿಣಾಮವಾಗಿ ಮಹಿಳೆಯೋರ್ವರು ಸಾವನ್ನಪ್ಪಿದ್ದರೆ, ಮೂವರು ಗಾಯಗೊಂಡು ಆಸ್ಪತ್ರೆ ಸೇರಿರುವ ಭಟ್ಕಳ ಘಟನೆ ತಾಲೂಕಿನ ಬೆಂಗ್ರೆ ಸೋಮಯ್ಯನಮನೆ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ತಾಲೂಕಿನ ಕೈಕಿಣಿ ಗ್ರಾಪಂ ಕೊನಕಾರ ನಿವಾಸಿ ಮಾಸ್ತಿ ಶಂಕರ ದೇವಡಿಗ (೪೮) ಎಂದು ಗುರುತಿಸಲಾಗಿದೆ. ಎಕ್ಟಿವ್ ಹೊಂಡಾ ಚಲಾಯಿಸುತ್ತಿದ್ದ ಈಕೆಯ ಪತಿ ಶಂಕರ ದೇವಡಿಗ, ಮೋಟಾರ್ ಬೈಕ್ನಲ್ಲಿದ್ದ ಹೊನ್ನಾವರದ ನಿವಾಸಿಗಳಾದ ಜಸ್ಮಿತ್ ಹಾಗೂ ಜೋತ್ಸಾ ಗಾಯಗೊಂಡವರಾಗಿದ್ದಾರೆ. ಶಂಕರ ದೇವಾಡಿಗರಿಗೆ ಶಿರಾಲಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಜಸ್ಮಿತ್ ಹಾಗೂ ಜೋತ್ಸಾರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಎಸ್ಐ ರವೀಂದ್ರ ಸಿಬ್ಬಂದಿಗಳೊಡನೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಮೊಬೈಲ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಲಕ್ಷಾಂತರ ಹಣ ಕ್ಷಣಾರ್ಧದಲ್ಲಿ ಮಾಯ,
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು:
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ ೪೧ ನೇ ವಾರ್ಷಿಕ ಅಥ್ಲೆಟಿಕ್ ಮೀಟ್