ಭಟ್ಕಳ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ಕರಾಟೆ ಕ್ರೀಡೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿ ನ ವಿದ್ಯಾರ್ಥಿಯಾದ ಕುಮಾರಿ. ನಾಗಶ್ರೀ ನಾಯ್ಕ ಇವಳು ಯುನಿವರ್ಸಿಟಿ ಬ್ಲೂ ಆಯ್ಕೆಯಾಗಿ ಹರಿಯಾಣಾ ರಾಜ್ಯದ ಕುರುಕ್ಷೇತ್ರ ವಿಶ್ವವಿದ್ಯಾಲಯದಲ್ಲಿ ಜರುಗುತ್ತಿರುವ ಅಂತರ ವಿಶ್ವವಿದ್ಯಾಲಯ-ರಾಷ್ಟ್ರಮಟ್ಟದ ಕರಾಟೆ ಕ್ರೀಡೆಯಲ್ಲಿ ಉತ್ತರವಲಯವನ್ನು ಪ್ರತಿನಿಧಿಸಿ, ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ
ಇವರ ಸಾಧನೆಗೆ ಭಟ್ಕಳ ಶೋಟೊಕಾನ್ ಕರಾಟೆ ಇನ್ಸ್ಟಿಟ್ಯೂಟ್, ಎಜ್ಯುಕೇಶನ್ ಟ್ರಸ್ಟ ನ ಆಡಳಿತ ಮಂಡಳಿ, ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರಾದ ವಿನಾಯಕ, ಉಪನ್ಯಾಸಕರು, ಸಿಬ್ಬಂದಿವರ್ಗ, ಕರಾಟೆ ತರಬೇತುದಾರರು, ಪಾಲಕರಾದ ಶ್ರೀಮತಿ ಪದ್ಮಾವತಿ ಹಾಗೂ ಶ್ರೀ ವೆಂಕಟೇಶ ನಾಯ್ಕ ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿಗಳಿಸಲೆಂದು ಶುಭ ಹಾರೈಸಿರುತ್ತಾರೆ
More Stories
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.