
ಭಟ್ಕಳ : “ಪ್ರಬಲ ಮನಸ್ಸನ್ನು ಹೊಂದಬೇಕಾದರೆ ಪ್ರಬಲ ದೇಹವು ಅಗತ್ಯ, ಆದುದರಿಂದ ಯುವ ಜನತೆ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಪ್ರಬಲ ದೇಹ ಮತ್ತು ಮನಸನ್ನು ಹೊಂದಬೇಕು” ಎಂದು ಶೋಟೊಕಾನ್ ಕರಾಟೆ ಸಂಸ್ಥೆಯ ತರಬೇತುದಾರ ಈಶ್ವರ್ ನಾಯ್ಕ್ ಆಸರಕೇರಿಯವರು ಹೇಳಿದರು.
ಭಟ್ಕಳ ನಗರದ ಶ್ರೀ ಗುರು ಸುಧೀಂದ್ರ ಮಹಾವಿದ್ಯಾಲಯದ ೨೦೨೧-೨೨ ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ‘ಖೇಲೊ ಎಸ್.ಜಿ.ಯಸ್.ಸಿ ಯನ್ನು ಕ್ರೀಡಾ ಜ್ಯೋತಿ ಸ್ವೀಕರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಟ್ಕಳ ಎಜುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುರೇಶ ವಿ. ನಾಯಕ ಕ್ರೀಡಾಳುಗಳಿಗೆ ಶುಭ ಹಾರೈಸಿ ಮಹಾವಿದ್ಯಾಲಯದಲ್ಲಿ ಲಭ್ಯವಿರುವ ಆಟದ ಮೈದಾನ ಹಾಗೂ ಇತರ ಮೂಲಭೂತ ಸೌಕರ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಪ್ರಾಶುಪಾಲ ಪ್ರೊ. ಶ್ರೀನಾಥ್ ಪೈ ಪ್ರಾಸ್ತಾವಿಕ ಮಾತುಗಳನ್ನಾಡಿದರು, ವಾಣಿಜ್ಯ ವಿಭಾಗದ ಉಪಪ್ರಾಂಶುಪಾಲ ಪ್ರೊ. ಫಣಿಯಪ್ಪಯ್ಯ ಹೆಬ್ಬಾರ್ ಸ್ವಾಗತಿಸಿದರು, ಕಲಾ ಮತ್ತು ನಿರ್ವಹಣಾ ವಿಭಾಗದ ಉಪ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಭಟ್ ‘ಕೋಸ್ಟಲ್ ಟು ಗ್ಲೋಬಲ್’ ಅಭಿಯಾನವನ್ನು ಪರಿಚಯಿಸಿದರು, ಉಪನ್ಯಾಸಕರುಗಳಾದ ದೇವೇಂದ್ರ ಕಿಣಿ ಕ್ರೀಡಾ ಪ್ರತಿಜ್ಞೆ ಭೋದಿಸಿದರು ಮತ್ತು ಆನಂದ್ ದೇವಾಡಿಗ ವಂದಿಸಿದರು. ವಿದ್ಯಾರ್ಥಿನಿ ರೋಜಾ ಬಂಢಾರಿ ನಿರೂಪಿಸಿದರು. ಕ್ರೀಡಾ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಗಳಿಗಾಗಿ ಈಶ್ವರ್ ನಾಯ್ಕ್ ಅವರನ್ನು ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ವಿನಾಯಕ್ ನಾಯ್ಕ್ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ