ಭಟ್ಕಳ: ಶುಕ್ರವಾರ ¨ ಆರ್.ಎನ್.ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ 2022-23ನೇ ಸಾಲಿನ ಸಾಂಸ್ಕೃತಿಕ ಕಾರ್ಯಕ್ರಮದ ಯೋಜನಾ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ‘ಸಂಸ್ಕೃತಿ’ ಕಾರ್ಯಕ್ರಮವನ್ನು ನಡೆಸಲು ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಡಾ|| ಸಂಜಯ್ ಕೆ.ಎಸ್ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಂತಹ ಕಾರ್ಯಕ್ರಮಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳಿಗೆ ಬುದ್ಧಿಶಕ್ತಿ, ಆಸಕ್ತಿ, ಅಭಿರುಚಿ ಮತ್ತು ಶಿಕ್ಷಣದ ಜೊತೆಗೆ ಜಾನಪದ ಸಾಂಸ್ಕೃತಿಕ ಚಟುವಟಿಕೆಗಳ ಅಭಿರುಚಿ ಹೆಚ್ಚಿಸಿದಂತಾಗುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಮಾಧವ ಪಿ. ರವರು ಪಠ್ಯದ ಜೊತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳಿಗೆ ನೀಡುವುದರಿಂದ ಕೌಶಲ್ಯಾಧಾರಿತ ಶಿಕ್ಷಣ ದೊರೆತು ವ್ಯಕ್ತಿತ್ವ ವಿಕಸನವಾಗುತ್ತದೆ ಎಂದರು.
ವೇದಿಕೆಯಲ್ಲಿ ಸಾಂಸ್ಕೃತಿಕ ಸಂಚಾಲಕರಾದ ಗಣಪತಿ ಕಾಯ್ಕಿಣಿ ಉಪಸ್ಥಿತರಿದ್ದು, ಎಲ್ಲ ಸಿಬ್ಬಂದಿ ವರ್ಗದವರು, ಉಪನ್ಯಾಸಕರು ಹಾಜರಿದ್ದರು. ಕು. ಗ್ಲೋರಿಯಾ ನಿರೂಪಣೆ ಮಾಡಿ, ಕು. ರೇಣುಕಾ ಪ್ರಾರ್ಥನೆಗೈದು ಕು. ಅಶ್ವಿನಿ ವಂದನಾರ್ಪಣೆಗೈದಳು.
More Stories
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.
ಸಮುದ್ರ ಕಿನಾರೆಯಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಬಾಲಕರು ನೀರು