ಭಟ್ಕಳ: ಮಂಗಳೂರಿನಿoದ ಮುಂಬೈ ಕಡೆ ಹೊರಟ ಕಾರೊಂದು ಪಾದಚಾರಿ ಮಹಿಳೆ ರಸ್ತೆ ದಾಟುವ ವೇಳೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದ ಸಾವನ್ನಪ್ಪಿದ ಘಟನೆ ಬುಧವಾರದಂದು ಸಂಜೆ ಮಾವಿನಕಟ್ಟೆ ಬೆಂಗ್ರೆ ಬಳಿ ನಡೆದಿದೆ.
ಮ್ರತ ಮಹಿಳೆ ಮಾಸ್ತಮ್ಮ ಕುಪ್ಪಯ ನಾಯ್ಕ (60) ಇಲ್ಲಿನ ಬೆಳಕೆ ಗೊರಟೆಯ ನಿವಾಸಿ ಎಂದು ತಿಳಿದು ಬಂದಿದೆ.
ಮಹಿಳೆಯು ತನ್ನ ಮಗಳ ಮನೆಗೆ ಭಟ್ಕಳದಿಂದ ಬೆಂಗ್ರೆಗೆ ತೆರಳಿದ್ದು ಈ ವೇಳೆ ಟೆಂಪೋ ಇಳಿದು ನಡೆದುಕೊಂಡು ಹೋಗುವಾಗ ಮಂಗಳೂರಿನಿoದ ಮುಂಬೈ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಬಂದು ಬಡಿದಿದೆ.
ಕಾರು ರಭಸದಿಂದ ಬಂದು ಬಡಿದ ಪರಿಣಾಮ ಮಹಿಳೆಯು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮ್ರತಪಟ್ಟಿದ್ದಾಳೆ.
ಮ್ರತ ಮಹಿಳೆಯ ದೇಹವನ್ನು ಅಪಘಾತ ಗೊಳಿಸಿದ ಕಾರಿನಲ್ಲಿಯೇ ತಕ್ಷಣಕ್ಕೆ ಮಹಿಳೆಯನ್ನು ಶಿರಾಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಅಲ್ಲಿನ ವೈದ್ಯರು ಮಹಿಳೆಯನ್ನು ಪರೀಕ್ಷೆ ನಡೆಸಿ ಮ್ರತಪಟ್ಟಿರುವುದು ದ್ರಢಪಡಿಸಿದ್ದಾರೆ.
ಆಸ್ಪತ್ರೆಯ ಶವಾಗಾರದಲ್ಲಿ ಮ್ರತ ದೇಹವನ್ನು ಇರಿಸಲಾಗಿದ್ದು, ಬಳಿಕ ಸರಕಾರಿ ಆಸ್ಪತ್ರೆ ಭಟ್ಕಳಕ್ಕೆ ರವಾನಿಸಲಾಗಿದೆ.
ಈ ಕುರಿತು ಮುರುಡೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
More Stories
ಕುಂದಾಪುರದಲ್ಲಿ ನಡೆದ ಸಾವಿಷ್ಕಾರ್ ಫೆಸ್ಟ್ ನಲ್ಲಿ ಉತ್ತಮ ಹೆಸರು ಗಳಿಸಿದ ಅಂಜುಮನ್ ಇಂಜಿನಿಯರಿ0ಗ್ ವಿದ್ಯಾರ್ಥಿಗಳು
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ