ಭಟ್ಕಳ: ಮಂಗಳವಾರ ಆರ್.ಎನ್.ಎಸ್. ಪಿ.ಯು ಮತ್ತು ಆರ್.ಎನ್.ಎಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಆರೋಗ್ಯ ಭಾರತಿ ಭಟ್ಕಳ ಕೇಂದ್ರದ ವತಿಯಿಂದ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಹಿತದೃಷ್ಟಿಯಿಂದ “ಮಹಿಳಾಕೋಶ’ವನ್ನು ಉದ್ಘಾಟಿಸಿ ವಿದ್ಯಾರ್ಥಿನಿಯರಿಗೆ ಮಹಿಳೆ ಮತ್ತು ಆರೋಗ್ಯದ ಕುರಿತು ಉಪನ್ಯಾಸ ನೀಡಲಾಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ ಆರ್.ಎನ್.ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳಾದ ದಿನೇಶ ಗಾವಂಕರವರು ಮಾತಾನಾಡಿ ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರ ಪಾತ್ರ ಅಪಾರವಾದದ್ದು. ಮಹಿಳೆಯರನ್ನು ಗೌರವಿಸುವುದು ಮತ್ತು ಹೆಣ್ಣು ಮಕ್ಕಳಿಗೆ ಮೌಲ್ಯಯುತ ಆರೋಗ್ಯ ಶಿಕ್ಷಣ ನೀಡುವುದು ಅಗತ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ಸಂಜಯ ಕೆ.ಎಸ್. ರವರು ಮಾತನಾಡಿ ಇಂತಹ ಕಾರ್ಯಕ್ರಮ ವಿದ್ಯಾರ್ಥಿನಿಯರಿಗೆ ಹೆಚ್ಚು ಹೆಚ್ಚು ನಡೆದು ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಲು ಹಾಗೂ ಮಹಿಳೆಯರ ಸಾಮಾಜಿಕ ಯೋಗಕ್ಷೇಮದ ಸ್ಥಿತಿ ಕಾಪಾಡುವುದು ಅಗತ್ಯ ಎಂದರು.
ನಂತರ ವಿದ್ಯಾರ್ಥಿನಿಯರಿಗೆ ಡಾ.ಪ್ರೀತಿ ಕುಲಕರ್ಣಿಯವರು ಮಹಿಳೆ ಮತ್ತು ಆರೋಗ್ಯದ ಕುರಿತು ಸಂಪೂರ್ಣ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಭಾರತಿ ಕೇಂದ್ರದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ದೇವೇಂದ್ರ ದೇವಾಡಿಗ, ಪಿ.ಯು ಕಾಲೇಜಿನ ಉಪನ್ಯಾಸಕರಾದ ಕೃಷ್ಣ ಪ್ರಸಾದ ಹಾಗೂ ಎಲ್ಲಾ ಉಪನ್ಯಾಸಕರು ಹಾಜರಿದ್ದರು. ಕುಮಾರಿ ರೇಣುಕಾ ಪ್ರಾರ್ಥಿಸಿ, ಕುಂಫಾ ಸ್ವಾಗತಿಸಿ, ಕುಮಾರಿ ಗೋರಿಯಾ ಕಾರ್ಯಕ್ರಮ ನಿರೂಪಿಸಿದರು. ಇದೆ ವೇದಿಕೆಯಲ್ಲಿ ಡಾ.ಪ್ರೀತಿ ಕುಲಕರ್ಣಿಯವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
More Stories
ಹೊಳೆಯಲ್ಲಿ ಆಕಸ್ಮಿಕವಾಗಿ ಮುಳುಗಿ ಇಬ್ಬರ ಸಾವು.
ಮೊಬೈಲ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಲಕ್ಷಾಂತರ ಹಣ ಕ್ಷಣಾರ್ಧದಲ್ಲಿ ಮಾಯ,
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು: