ಭಟ್ಕಳ: ಭಾರತವು ಸ್ವಾತಂತ್ರೊ÷್ಯÃತ್ಸವದ ಅಮೃತಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಭಟ್ಕಳ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘವು ತಾಲೂಕಿನ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ‘ಸ್ವಾತಂತ್ರ್ಯ ಚಳುವಳಿಯಲ್ಲಿ ಪತ್ರಿಕೆಗಳ ಪಾತ್ರ’ ವಿಷಯದ ಕುರಿತಂತೆ ಆ.5 ಶುಕ್ರವಾರ ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢ ಶಾಲೆಯಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಿದೆ ಎಂದು ಸಂಘದ ಅಧ್ಯಕ್ಷ ಎಂ.ಆರ್.ಮಾನ್ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವ ಆಸಕ್ತ ವಿದ್ಯಾರ್ಥಿಗಳ ವಿವರವನ್ನು ಶಾಲಾ ಮುಖ್ಯಸ್ಥರು ದೃಢೀಕರಣದೊಂದಿಗೆ ಆ.3 ರಂದು ಸಂಜೆ 5ಗಂಟೆ ಒಳಗಾಗಿ ಪ್ರಬಂಧ ಸ್ಪರ್ಧೆಯ ಸಂಚಾಲಕ ಅತಿಕರ್ರಹ್ಮಾನ್ ಶಾಬಂದ್ರಿಯವರ ವಾಟ್ಸಪ್ 9900792926, 9886455416, ಹಾಗೂ ಕಾರ್ಯದರ್ಶಿ ಶೈಲೇಶ್ ವೈದ್ಯ(95915 20482) ಗೆ ಕಳುಹಿಸಿಕೊಡಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ
ಪ್ರಬoಧ ಸ್ಪರ್ಧೆಯು ಕನ್ನಡ, ಇಂಗ್ಲಿಷ್ ಮತ್ತು ಉರ್ದು ಭಾಷೆಯಲ್ಲಿದ್ದು ಮೂರು ಭಾಷೆಗಳಿಗೆ ಪ್ರತ್ಯೇಕವಾಗಿ ಪ್ರಥಮ ರೂ.3000, ದ್ವಿತೀಯಾ ರೂ.2000 ಹಾಗೂ ತೃತೀಯಾ ರೂ.1000 ಬಹುಮಾನ ಮತ್ತು ಪ್ರಶಸ್ತಿಪತ್ರವನ್ನು ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ತಮ್ಮ ಶಾಲಾ ಮುಖ್ಯಸ್ಥರ ದೃಢೀಕರಣ, ಶಾಲಾ ಗುರುತು ಪತ್ರ ಅಥವಾ ಶಿಕ್ಷಕರೊಂದಿಗೆ ನೇರವಾಗಿ ಆ.5ರಂದು ಬೆಳಿಗ್ಗೆ 9.30ಕ್ಕೆ ಸರಿಯಾಗಿ ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆ(ಐ.ಎ.ಯು.ಎಚ್.ಎಸ್)ಯಲ್ಲಿ ಹಾಜರಾಗತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ,
More Stories
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.