ಭಟ್ಕಳ: ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ಮಂಗಳವಾರ ಬೆಳಿಗ್ಗೆ ಮನೆಯ ಮೇಲೆ ಗುಡ್ಡ ಕುಸಿದಿದೆ. ಮನೆ ಸಂಪರ್ಣ ಕುಸಿದಿದ್ದು, ಮಣ್ಣು, ಅವಶೇಷಗಳಡಿ ನಾಲ್ವರು ಸಿಲುಕಿದ್ದಾರೆ.
ಮುಟ್ಟಳ್ಳಿ ಗೌರಮ್ಮಜ್ಜಿ ಮನೆ ಇದಾಗಿದೆ. ಮನೆಯಲ್ಲಿದ್ದ ಲಕ್ಷ್ಮಿ ನಾರಾಯಣ ನಾಯ್ಕ (೪೮), ಅವರ ಪುತ್ರಿ ಲಕ್ಷ್ಮಿ ನಾಯ್ಕ (೩೩), ಪುತ್ರ ಅನಂತ ನಾರಾಯಣ ನಾಯ್ಕ (೩೨) ಹಾಗೂ ಸಂಬಂಧಿ ಪ್ರವೀಣ ಬಾಲಕೃಷ್ಣ ನಾಯ್ಕ (೨೦) ಮಣ್ಣಿನಲ್ಲಿ ಸಿಲುಕಿಕೊಂಡಿದ್ದಾರೆ.
ಗುಡ್ಡದ ಮೇಲಿನಿಂದ ಭಾರಿ ಪ್ರಮಾಣದಲ್ಲಿ ಚಿರೆಕಲ್ಲು ಮಿಶ್ರಿತ ಮಣ್ಣು ಕುಸಿದಿದೆ. ಮನೆ ಸಂಪರ್ಣ ನಾಶವಾಗಿದೆ. ಸ್ಥಳದಲ್ಲಿ ರಕ್ಷಣಾ ಕರ್ಯ ಆರಂಭವಾಗಿದೆ.
ಭಟ್ಕಳದ ನಾಗ ಮಾಸ್ತಿ ದೇವಸ್ಥಾನದ ಮರ್ತಿಗಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿವೆ. ರೈಲು ನಿಲ್ದಾಣ ಸಮೀಪದಲ್ಲಿರುವ ಈ ದೇವಸ್ಥಾನವು ಇತಿಹಾಸ ಪ್ರಸಿದ್ಧವಾಗಿದೆ. ದೇವಸ್ಥಾನದ ನಾಲ್ಕೈದು ಮರ್ತಿಗಳು ನೀರು ಪಾಲಾಗಿವೆ.
ಕೊಪ್ಪ ಪಂಚಾಯತ್ ಬ್ರಿಡ್ಜ್ ಕೊಚ್ಚಿ ಹೋಗಿದೆ
More Stories
ಹೊಳೆಯಲ್ಲಿ ಆಕಸ್ಮಿಕವಾಗಿ ಮುಳುಗಿ ಇಬ್ಬರ ಸಾವು.
ಮೊಬೈಲ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಲಕ್ಷಾಂತರ ಹಣ ಕ್ಷಣಾರ್ಧದಲ್ಲಿ ಮಾಯ,
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು: