ಭಟ್ಕಳ: ತಾಲ್ಲೂಕಿನ ಶಿರಾಲಿಯ ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮಿ ಪೂಜೆಯ ಪ್ರಯುಕ್ತ ಸಾವಿರಾರು ಮಹಿಳೆಯರು ಉಡಿತುಂಬುವ ಕಾರ್ಯಕ್ರಮ ನೆರವೇರಿಸಿದರು.
ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ವರ್ಷಂಪ್ರತಿಯAತೆ ಈ ಸಲವೂ ಸಹ ದೇವಸ್ಥಾನದ ಎದುರು ವರಮಹಾಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ ವೃತ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಳ್ವೆಕೋಡಿ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಮಹಿಳೆಯರು ಉಡಿ ತುಂಬುವುದರ ಮೂಲಕ ವರಮಹಾಲಕ್ಷಿö್ಮÃ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಿ ಶ್ರೀ ದೇವರಿಗೆ ಉಡಿತುಂಬಿದರು. ಇದೇ ಸಂದರ್ಭದಲ್ಲಿ ಭಕ್ತರು ಶ್ರೀ ದುರ್ಗಾಪರಮೇಶ್ವರಿ ದರ್ಶನ ಪಡೆದರು. ದೇವಸ್ಥಾನದ ಆಡಳಿತ ಮಂಡಳಿ ವರಮಹಾಲಕ್ಷಿö್ಮÃ ಪೂಜೆ ಬೇಕಾದ ಸಕಲ ಸಿದ್ಧತೆ ಮತ್ತು ಎಲ್ಲಿಯೂ ನೂಕು ನುಗ್ಗಲು ಉಂಟಾಗದAತೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಿತ್ತು. ಮಾರಿ ಜಾತ್ರ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ರಾಮಾ ಮೊಗೆರ್ ಮಾತನಾಡಿದರು
ವರಮಹಾಲಕ್ಷಿö್ಮÃ ಪೂಜೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರಾದ ನಾರಾಯಣ ದೈಮನೆ, ಹನುಮಂತ ನಾಯ್ಕ, ಅರವಿಂದ ಪೈ, ತಿಮ್ಮಪ್ಪ ಹೊನ್ನಿಮನೆ, ಮಾರಿ ಜಾತ್ರಾ ಸಮಿತಿಯ ಅಧ್ಯಕ್ಷ ರಾಮಾ ಮೊಗೇರ, ದೇವಸ್ಥಾನದ ವ್ಯವಸ್ಥಾಪಕ ರಾಜು ಮೊಗೇರ ಮುಂತಾದವರಿದ್ದು, ವರಮಹಾಲಕ್ಷ್ಮಿ ಪೂಜೆ ಯಶಸ್ವಿಯಾಗಿ ನಡೆಯುವಂತೆ ಸಹಕರಿಸಿದರು. ಆಗಮಿಸಿದ ಸಾವಿರಾರು ಭಕ್ತರು ಪ್ರಸಾದ ಭೋಜನ ಸ್ವೀಕರಿಸಿದರು. ಪಟ್ಟಣದ ಚೌತನಿಯ ಕಾಳಿಕಾಂಬಾ ದೇವಸ್ಥಾನದಲ್ಲೂ ಸಹ ಶ್ರೀ ವರಮಹಾಲಕ್ಷ್ಮಿ ವೃತಾಚರಣೆಯನ್ನು ಮಹಿಳಾ ಸಂಘದ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಸಲಾಯಿತು.
More Stories
ಹೊಳೆಯಲ್ಲಿ ಆಕಸ್ಮಿಕವಾಗಿ ಮುಳುಗಿ ಇಬ್ಬರ ಸಾವು.
ಮೊಬೈಲ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಲಕ್ಷಾಂತರ ಹಣ ಕ್ಷಣಾರ್ಧದಲ್ಲಿ ಮಾಯ,
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು: