ಭಟ್ಕಳ :ಅತಿವೃಷ್ಟಿಯಿಂದಾಗಿ ಭಟ್ಕಳ ತಾಲೂಕಿನ ಹೆಬಳೆ ಪಂಚಾಯತ್ ವ್ಯಾಪ್ತಿಯ ತೆಂಗಿನಗುAಡಿಯಲ್ಲಿ ಮೀನುಗಾರಿಕೆ ದೋಣಿಗಳು ಹಾನಿಗೊಳಗಾಗಿ ಅಪಾರ ಪ್ರಮಾಣದ ನಷ್ಟವುಂಟಾಗಿದ್ದು ಸರ್ಕಾರ ತಕ್ಷಣವೇ ಪ್ರತಿ ಮೀನುಗಾರರ ಕುಟುಂಬಕ್ಕೆ ರೂ.1ಲಕ್ಷ ಪರಿಹಾರ ನೀಡಬೇಕೆಂದು ವೆಲ್ಫೇರ್ ಪಾರ್ಟಿಆಫ್ಇಂಡಿಯಾಉತ್ತರಕನ್ನಡಜಿಲ್ಲಾ ಸಮಿತಿ ತಹಸಿಲ್ದಾರರಿಗೆ ಆಗ್ರಹಿಸಿದೆ.
ಈ ಕುರಿತಂತೆ ಸೋಮವಾರ ಜಿಲ್ಲಾ ಸಮಿತಿಯ ನಿಯೋಗವೊಂದು ತಹಸಿಲ್ದಾರರ ಸುಮಂತ್ ಬಿ.ಯವರನ್ನು ಭೇಟಿಯಾಗಿ ಮನವಿ ಅರ್ಪಿಸಿತು.
ಅತಿವೃಷ್ಟಿಯಿಂದಾಗಿ ಸಂಕಷ್ಟದಲ್ಲಿರುವ ಮೀನುಗಾರ ಕುಟುಂಬ ಭರಿಸಲಾಗದ ನೋವಿನಲ್ಲಿದೆ.ತಾಲೂಕಾಡಳಿತ ತಕ್ಷಣವೇ ಸ್ಪಂಧಿಸುವುದರ ಮೂಲಕ ಬಡಮೀನುಗಾರರ ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂದು ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿಆಫ್ಇಂಡಿಯಾಉತ್ತರಕನ್ನಡಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಸಿಫ್ ಶೇಖ್, ಖಜಾಂಚಿಅಬ್ದುಲ್ಜಬ್ಬಾರ್ ಅಸದಿ, ಮುಖಂಡರಾದ ಫಾರೂಕ್ ಶೇಕ್, ಯುವಮುಖಂಡಝಹೂರ್ ಲಾಟ್ ಮುಂತಾದವರು ಹಾಜರಿದ್ದರು.
More Stories
ಮೊಬೈಲ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಲಕ್ಷಾಂತರ ಹಣ ಕ್ಷಣಾರ್ಧದಲ್ಲಿ ಮಾಯ,
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು:
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ ೪೧ ನೇ ವಾರ್ಷಿಕ ಅಥ್ಲೆಟಿಕ್ ಮೀಟ್