ಭಟ್ಕಳ: ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರತಿಯೋರ್ವ ಮತದಾರರೂ ಕೂಡಾ ತಮ್ಮ ಮತದಾರರ ಗುರುತಿನ ಚೀಟಿಯನ್ನು ಆಧಾರ್ ಕಾರ್ಡನೊಂದಿಗೆ ಇಲ್ಲವೇ ತಮ್ಮ ಇತರೇ ಗುರುತಿನ ಚೀಟಿಯೊಂದಿಗೆ ಜೋಡಣೆ ಮಾಡಿಕೊಳ್ಳುವುದು ಅವಶ್ಯಕವಾಗಿದ್ದು ಪ್ರತಿಯೋರ್ವರೂ ತಮ್ಮ ಮೊಬೈಲ್ನಿಂದ, ತಹಸೀಲ್ದಾರ್ ಕಚೇರಿ, ಪುರಸಭಾ ಕಚೇರಿಯಲ್ಲಿ ತೆರೆದಿರುವ ಕೌಂಟರ್ನಲ್ಲಿ ಇಲ್ಲವೇ ಬಿ.ಎಲ್.ಓ.ಗಳು ನಿಮ್ಮಲ್ಲಿಗೆ ಬಂದಾಗ ಜೋಡಣೆ ಮಾಡಿಕೊಳ್ಳಬೇಕು ಎಂದು ಪಶ್ಚಿಮಘಟ್ಟ ಕಾರ್ಯಪಡೆಯ ಅಧ್ಯಕ್ಷ ಗೋವಿಂದ ನಾಯ್ಕ ಅವರು ಜನತೆಯನ್ನು ಕೋರಿದ್ದಾರೆ.
ಸರಕಾರ ಮತ್ತು ಚುನಾವಣಾ ಆಯೋಗವು ಚುನಾವಣಾ ಮತದಾರರ ಪಟ್ಟಿಯನ್ನು ಶುದ್ಧಗೊಳಿಸಲಿಕ್ಕೋಸ್ಕರ ಈ ಒಂದು ಕ್ರಮಕ್ಕೆ ಮುಂದಾಗಿದ್ದು ಆಧಾರ್ ಇಲ್ಲವೇ ಗುರುತಿನ ಚೀಟಿಯನ್ನು ನಿಮ್ಮ ಮತದಾರರ ಗುರುತಿನ ಚೀಟಿಯೊಂದಿಗೆ ಜೋಡಣೆ ಮಾಡುವುದರಿಂದ ಒಂದಕ್ಕಿAತ ಹೆಚ್ಚು ಕಡೆಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಯಾಗಿದ್ದರೆ ಅದನ್ನು ಪತ್ತೆ ಹಚ್ಚುವುದು ಸುಲಭವಾಗುತ್ತದೆ. ಅಲ್ಲದೇ ಮುಂದಿನ ಚುನಾವಣಾ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಲು ಕೂಡಾ ಇದು ಬಹಳ ಸಹಕಾರಿಯಾಗುತ್ತದೆ. ಪ್ರತಿಯೋರ್ವ ಮತದಾರರು ಕೂಡಾ ವಿಳಂಬ ಮಾಡದೇ ಆಧಾರ್ ಇಲ್ಲದೇ ಗುರುತಿನ ಚೀಟಿಯನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಜೋಡಣೆ ಮಾಡಿಕೊಳ್ಳಿ ಎಂದೂ ಅವರು ಕರೆ ನೀಡಿದ್ದಾರೆ.
More Stories
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.