ಭಟ್ಕಳ : ಮುರ್ಡೇಶ್ವರದ ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಯೋರ್ವನಿಗೆ ಹಾವು ಕಚ್ಚಿದ್ದು, ಬಾಲಕನನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮುರ್ಡೇಶ್ವರದ ಬಸ್ತಿಮಕ್ಕಿ ನಿವಾಸಿ ಅಲ್ಫಾಝ್ ಸರ್ತಾಜ್(೧೨) ಅಸ್ವಸ್ಥ ಬಾಲಕ. ಮುರ್ಡೇಶ್ವರದ ನ್ಯಾಷನಲ್ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯಲ್ಲಿ ೫ನೇ ತರಗತಿ ಕೊಠಡಿಯಲ್ಲಿ ಪಾಠ ಕೇಳುತ್ತಿರುವಾಗ ಆಕಸ್ಮಿಕವಾಗಿ ಪೆನ್ಸಿಲ್ ಕಿಟಿಕಿಯಿಂದ ಹೊರಗೆ ಬಿದ್ದಿದೆ. ಪೆನ್ಸಿಲ್ ತರಲು ಹೊರಗೆ ಹೋದ ಬಾಲಕನಿಗೆ ಅಲ್ಲೇ ಇರುವ ಹಾವೊಂದು ಕಚ್ಚಿ ಅಸ್ವಸ್ಥನಾಗಿದ್ದಾನೆ. ಕೂಡಲೇ ಬಾಲಕನ್ನು ಮುರ್ಡೇಶ್ವರ ಆಯುಷ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಚಿಕಿತ್ಸೆ ಮುಂದುವರೆದಿದೆ.
More Stories
ಮೊಬೈಲ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಲಕ್ಷಾಂತರ ಹಣ ಕ್ಷಣಾರ್ಧದಲ್ಲಿ ಮಾಯ,
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು:
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ ೪೧ ನೇ ವಾರ್ಷಿಕ ಅಥ್ಲೆಟಿಕ್ ಮೀಟ್