May 17, 2024

Bhavana Tv

Its Your Channel

46 ವರ್ಷದ ಹಿಂದೆ ಹೊಡೆದಾಟ ಪ್ರಕರಣ; ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಭಟ್ಕಳ: ಕಳೆದ 46 ವರ್ಷದ ಹಿಂದೆ ಹೊಡೆದಾಟ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಈಶ್ವರ ಮಾಣಿ ನಾಯ್ಕ ತಾಲೂಕಿನ ಬೆಳಕೆ ನಿವಾಸಿ ಎಂದು ತಿಳಿದು ಬಂದಿದೆ. ಈತ ಕಳೆದ 1975 ರಲ್ಲಿ ನಡೆದ ಹೊಡೆದಾಟ ಪ್ರಕರಣದಲ್ಲಿ ಒಟ್ಟು 11 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪೈಕಿ 10 ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದು ನ್ಯಾಯಾಲಯವು ದೋಷಿಗಳೆಂದು ತೀರ್ಪು ನೀಡಿತ್ತು. ಇದರಲ್ಲಿಯ ಆರೋಪಿ ಸಂಖ್ಯೆ 8 ನೇಯವರಾದ ಈಶ್ವರ ಮಾಣಿ ನಾಯ್ಕ ಈತನು ವಿಚಾರಣಾ ಸಮಯದಿಂದ ತಲೆಮರಿಸಿಕೊಂಡಿದ್ದನು.

ಆದರೆ ಈತ ಭಟ್ಕಳ ಸೊಸೈಟಿಯೊಂದರಲ್ಲಿ ಲೋನ್ ಪಡೆದಿರುವ ಆದರದ ಮೇಲೆ ಆತನ ಮಾಹಿತಿ ಕಲೆ ಹಾಕಿದ ಪೊಲೀಸರು ಆರೋಪಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

error: