ಭಟ್ಕಳ: 168 ನೇ ಶ್ರೀ ನಾರಾಯಣಗುರು ಜಯಂತಿಯ ಪ್ರಯುಕ್ತ ಭಟ್ಕಳ ತಾಲೂಕು ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನ ಸಂಘ,ಭಟ್ಕಳ ಇದರ ವತಿಯಿಂದ ಪಿ.ಯು. ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ನಡೆಯಿತು
ಸ್ಪರ್ದೇಯಲ್ಲಿ ಭಟ್ಕಳ ನಗರದ ಡಿ.ನ್ಯೂ ಇಂಗ್ಲೀಷ್ ಪಿ.ಯು.ಕಾಲೇಜಿನ ವಿದ್ಯಾರ್ಥಿನಿ ಹರ್ಷಿತಾ ಎಂ. ನಾಯ್ಕ ಪ್ರಥಮ ಸ್ಥಾನ ಪಡೆದಿದ್ದಾಳೆ. ಶಿರಾಲಿಯ ಜನತಾ ವಿದ್ಯಾಲಯದ ರೇನಿಷಾ ರೋಡ್ರಿಗಸ್ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಭಟ್ಕಳದ ಸಿದ್ದಾರ್ಥ ಪಿ.ಯು. ಕಾಲೇಜಿನ ಪರಮೇಶ್ವರಿ ಎಸ್. ಗೌಡ ತೃತೀಯ ಮುರುಡೇಶ್ವರದ ಆರ್.ಎನ್.ಎಸ್. ಪಿ.ಯು. ಕಾಲೇಜಿನ ಸೂರ್ಯ ನಾಯ್ಕ ಸಮಾಧಾನಕರ ಬಹುಮಾನ ಪಡೆದು ಆಯ್ಕೆಯಾಗಿದ್ದಾರೆ. ಸಾಮಾಜಿಕ ಪರಿವರ್ತನೆಗೆ ಶ್ರೀ ನಾರಾಯಣ ಗುರುಗಳ ಕೊಡಗೆ ಎಂಬ ವಿಷಯದಲ್ಲಿ 5 ನಿಮಿಷ ಅವಧಿಯ ಭಾಷಣ ಸ್ಪರ್ದೇ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಮುಖ್ಯ ವ್ಯವಸ್ಥಾಪಕರಾದ ಎಸ್.ಎಂ. ನಾಯ್ಕ ,ಹೆಸ್ಕಾಂ ಇಂಜನೀಯ ಶಿವಾನಂದ ಎನ್. ಬ್ರಹ್ಮಶ್ರೀ ನಾರಾಯಣ ಗುರು ಧರ್ಮಪರಿಪಾಲನ ಸಂಘದ ಅಧ್ಯಕ್ಷ ಮನಮೋಹನ ನಾಯ್ಕ, ಸಿದ್ದಾರ್ಥ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಅರ್ಚನಾ, ಇದ್ದರು. ಸ್ಪರ್ಧೆಯ ನಿರ್ಣಾಯಕರಾಗಿ ಗಂಗಾಧರ ನಾಯ್ಕ, ರ್ಶರೀಧರ ಜಂಬರಮಠ ಹಾಗೂ ಪಾಂಡುರAಗ ನಾಯ್ಕ ಕಾರ್ಯನಿರ್ವಹಿಸಿದರು.
More Stories
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.