ಭಟ್ಕಳ: ಬೆಳ್ಳಂಬೆಳಿಗ್ಗೆ ಸುಮಾರು 50ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನೊಳಗೊAಡ 10 ತಂಡ ಭಟ್ಕಳದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿ,ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.
ಅವರ ಸಹಚರರ ಮನೆಗಳಲ್ಲಿ ತಪಾಸಣೆ ಕೈಗೊಂಡಿದೆ. 10 ಪೊಲೀಸ್ ಅಧಿಕಾರಿಗಳು, 40 ಪೊಲೀಸ್ ಸಿಬ್ಬಂದಿಗಳನ್ನೊಳಗೊoಡ 10 ತಂಡವನ್ನು ರಚಿಸಲಾಗಿತ್ತು. ಶೋಧನಾ ಕಾರ್ಯಚರಣೆಯಲ್ಲಿ ಭಟ್ಕಳ ಶಹರ ಪೊಲೀಸ್ ಠಾಣೆ, ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ, ಅಕ್ರಮ ಗಾಂಜಾ ಸಾಗಾಟ, ಮನೆಕಳ್ಳತನ, ಮತ್ತು ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಪ್ರಕರಣ ಹಾಗೂ ಉಡುಪಿ ಜಿಲ್ಲೆಯಲ್ಲಿ ಮೊಯ್ಲಿ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಅಕ್ರಮ ಸಯ್ಯದ್ ಮೊಹಮ್ಮದ ಹುಸೇನ್ ಬಿಳಲಖಂಡ ಹಾಗೂ ಭಟ್ಕಳ ಶಹರ ಪೊಲೀಸ್ ಠಾಣೆ, ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ, ಗಾಂಜಾ ಸಾಗಾಟ ಪ್ರಕರಣದಲ್ಲಿ. ಮೊಹಮ್ಮದ ಇಮ್ರಾನ ಮಹಮ್ಮದ ಭಾಷಾ ಶೇಖ, ಗೋಪಾಲ ಕೃಷ್ಣ ರೋಡ್ ಅಲು ಕಂಪೌಡ ನಿವಾಸಿ ಆಗಿದ್ದು
ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿಗಳ ಸಹಚರರ ಮನೆಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬದ್ರಿನಾಥ್ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕೆ.ಯು.ಬೆಳ್ಳಿಯಪ್ಪ ನೇತೃತ್ವದಲ್ಲಿ, ಭಟ್ಕಳ ನಗರ ಪೊಲೀಸ್ ಇನ್ ಸ್ಪೆಕ್ಟರ್ ದಿವಾಕರ ಪಿ.ಎಮ್ ಭಟ್ಕಳ ಗ್ರಾಮಾಂತರ ಸಿಪಿಐ ಮಹಾಬಲೇಶ್ವರ ನಾಯ್ಕ ಹಾಗೂ ಇತರೆ ಉಪವಿಭಾಗದ ಪೊಲೀಸ್ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಗಳನ್ನು ಉಪಸ್ಥಿತಿ ಇದ್ದರು.
More Stories
ಹೊಳೆಯಲ್ಲಿ ಆಕಸ್ಮಿಕವಾಗಿ ಮುಳುಗಿ ಇಬ್ಬರ ಸಾವು.
ಮೊಬೈಲ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಲಕ್ಷಾಂತರ ಹಣ ಕ್ಷಣಾರ್ಧದಲ್ಲಿ ಮಾಯ,
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು: