
ಭಟ್ಕಳ ತಾಲೂಕಿನ ತೆಂಗಿನಗುAಡಿ ಸರ್ಕಾರಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಶಾಸಕ ಸುನೀಲ ನಾಯ್ಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಪಠ್ಯದಷ್ಟೇ ಪ್ರಾಮುಖ್ಯತೆಯನ್ನು ಕ್ರೀಡೆಗೂ ನೀಡಬೇಕು. ಕ್ರೀಡೆಯಿಂದ ಎಷ್ಟು ಎತ್ತರಕ್ಕೆ ಕೂಡ ಬೆಳೆಯಬಹುದು ಎನ್ನುವುದಕ್ಕೆ ತಾನೇ ಸಾಕ್ಷಿ ಇದೇನೆ ಎಂದ ಅವರು, ಶಾಸಕನಾಗಲು ತನಗೆ ಕ್ರೀಡಾ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ಹಿಂದೆ ಕ್ರೀಡಾಪಟುಗಳಿಗೆ ಉತ್ತಮ ಕ್ರೀಡಾಂಗಣ, ಸೌಲಭ್ಯಗಳು ಇಲ್ಲವಾಗಿತ್ತು. ಆದರೆ ಇಂದು ಸುಸಜ್ಜಿತ ಕ್ರೀಡಾಪಟುಗಳಿಗೆ ದೊರೆಯುತ್ತಿದ್ದು ಸಾಧನೆ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ನನ್ನ ಕ್ಷೇತ್ರದ ಯಾವುದೇ ವಿದ್ಯಾರ್ಥಿ ಜಿಲ್ಲಾ ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ನನ್ನ ಕ್ಷೇತ್ರದ ಯಾವುದೇ ವಿದ್ಯಾರ್ಥಿ ಜಿಲ್ಲಾ, ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸಲು ಆಯ್ಕೆಯಾದರೆ ಅವರ ಸಂಪೂರ್ಣ ವೆಚ್ಚ ಭರಿಸುತ್ತೇನೆ ಎಂದು ಕ್ರೀಡಾಪಟುಗಳಿಗೆ ಭರವಸೆಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷೆ ಕುಪ್ಪು ಗೊಂಡ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮಮತಾದೇವಿ ಜಿ.ಎಸ್., ಡಿವೈಎಸ್ಪಿ ಕೆ.ಯು. ಬೆಳ್ಳಿಯಪ್ಪ ತಾಪಂ ಇಒ ಪ್ರಭಾಕರ ಚಿಕ್ಕನಮನೆ, ಜಿಲ್ಲಾ ಪರಿವೀಕ್ಷಕ ಚಂದ್ರಶೇಖರ, ದೈಹಿಕ ಶಿಕ್ಷಣ ಪರಿವೀಕ್ಷಕ ಚಂದ್ರಶೇಖರ ಸಾಂಗ್ಲಿ,ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆನಂದ ನಾಯ್ಕ,ನಾಯ್ಕ, ಸುರೇಶ ಮುರ್ಡೇಶ್ವರ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಲ್ಲಾಸ ನಾಯ್ಕ, ಜಿಲ್ಲಾ ಕ್ರೀಡಾ ಸಂಘದ ಅಧ್ಯಕ್ಷೆ ಸಾಧನಾ ಬರ್ಗಿ, ಶಾಲಾಭಿವೃದ್ಧಿ ಸಮಿತಿಯ ಮೊಹನ ದೇವಡಿಗ, ತೆಂಗಿನಗುAಡಿ ಪ್ರೌಢ ಶಾಲಾ ಮುಖ್ಯಾಧ್ಯಾಪಕಿ ಆಶಾ ಭಟ್ಟ, ಎಂ.ಟಿ. ಗೊ0ಡ, ಮಾವಳ್ಳಿ-2 ಗ್ರಾಪಂ ಅಧ್ಯಕ್ಷ ಮಹೇಶ ನಾಯ್ಕ, ಎಂ.ಎನ್. ನಾಯ್ಕ, ರವೀಂದ್ರ ಭಟ್ಟ, ಎಂ.ಜಿ.ನಾಯ್ಕ, ಸ್ಥಳೀಯ ಪ್ರಮುಖರಾದ ಸುಬ್ರಾಯ ದೇವಡಿಗ ಮುಂತಾದವರು ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ಸ್ವಾಗತಿಸಿದರು.ತಾಲೂಕು ದೈಹಿಕ ಶಿಕ್ಷಣ ಪರಿವೀಕಕ ಚಂದ್ರಶೇಖರ ಶೆಟ್ಟಿ,ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿಕ್ಷಕ ಪರಮೇಶ್ವರ ನಾಯ್ಕ,ಸುರೇಶ ಮುರ್ಡೇಶ್ವರ ಕಾರ್ಯಕ್ರಮ ನಿರ್ವಹಿಸಿದರು.
More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ