ಭಟ್ಕಳ: ಕಳೆದ ಸೆಪ್ಟೆಂಬರ್ 17 ರಂದು ಮನೆಯಿಂದ ಕಟ್ಟಿಗೆ ತರಲು ಅರಣ್ಯಕ್ಕೆ ಹೋಗಿ ನಾಪತ್ತೆಯಾದ ಮಹಿಳೆ ಶವವಾಗಿ ಪತ್ತೆಯಾಗಿದ್ದಾಳೆ. ಬೆಂಗ್ರೆ ಉಳ್ಳಮಣ್ಣಿನ ಮಾಲೆಕೊಡ್ಲು ಸಮೀಪ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಶವವಾಗಿ ಪತ್ತೆಯಾದ ಮಹಿಳೆಯನ್ನು ಮುರುಡೇಶ್ವರ ನಿವಾಸಿ ಮಾದೇವಿ ಸುಕ್ರಯ್ಯ ದೇವಡಿಗ (57) ಎಂದು ಗುರುತಿಸಲಾಗಿದೆ.
ದಿನನಿತ್ಯ ಅರಣ್ಯಕ್ಕೆ ಹೋಗಿ ಕಟ್ಟಿಗೆ ತರುತ್ತಿದ್ದಳು ಎನ್ನಲಾಗಿದ್ದು ಪ್ರತಿ ನಿತ್ಯ ಈಕೆ ಬೆಳಗ್ಗೆ 8 ಗಂಟೆಗೆ ಕಟ್ಟಿಗೆ ತರಲು ಅರಣ್ಯಕ್ಕೆ ಹೋದರೆ 11 ಗಂಟೆ ಒಳಗಾಗಿ ಮನೆಗೆ ಬರುತ್ತಿದ್ದಳು.
ಆದರೆ ಅಂದು ಬೆಳಗ್ಗೆ ಹೋದವಳು ಸಂಜೆಯಾದರೂ ಮನೆಗೆ ಬಂದಿಲ್ಲ. ಇದರಿಂದ ಗಾಬರಿಗೊಂಡ ಮನೆಯವರು ಎಲ್ಲಾ ಕಡೆ ಹುಡುಕಿಕೊಂಡು ಎಲ್ಲು ಸಿಗದೇ ಇದ್ದ ನಂತರ ಸಂಬAಧಿಕರ ಮನೆಯಲ್ಲೂ ವಿಚಾರಿಸಿದರು ಅಲ್ಲಿಯೂ ಕೂಡ ಆಕೆ ಹೋಗದೆ ಇರುವ ಕಾರಣ ಕಾಣೆಯಾಗಿರುವ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಮಹಿಳೆಯ ಶವ ಬೆಂಗ್ರೆ ಉಳ್ಳಮಣ್ಣಿನಲ್ಲಿ ಮಾಲೆಕೊಡ್ಲು ಸಮೀಪ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
More Stories
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.