May 3, 2024

Bhavana Tv

Its Your Channel

ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಪಕ್ಕದಲ್ಲಿದ್ದ ಗೇರು ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಭಟ್ಕಳ:ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಪಕ್ಕದಲ್ಲಿದ್ದ ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕೆ ಹೊನ್ನೆಮಡಿಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಪದ್ಮಯ್ಯ ತಿಮ್ಮಪ್ಪ ನಾಯ್ಕ (55) ವರ್ಷ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಆಗಿದ್ದು ಈತ ಕೆಲವು ವರ್ಷಗಳಿಂದ ಅನಾರೋಗ್ಯ ದಿಂದ ಬಳಲುತ್ತಿದ್ದು ಇದನ್ನೆ ಮನಸ್ಸಿಗೆ ಹಚ್ಚಿಕೊಂಡು ಮಂಗಳವಾರ ರಾತ್ರಿ ಮನೆಯವರು ಒಟ್ಟಿಗೆ ಕುಳಿತು ಊಟ ಮಾಡಿ ಮಲಗಿದ್ದ ವ್ಯಕ್ತಿ ಮುಂಜಾನೆಯ ಒಳಗೆ ಮನೆಯ ಪಕ್ಕದಲ್ಲಿದ್ದ ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತನ ಹೆಂಡತಿ ಮರದ ಮೇಲಿದ್ದ ಗಂಡನ ದೇಹವನ್ನು ನೋಡಿ ಕಿರುಚಾಡಿ ಕೊಂಡಿದ್ದು ತಕ್ಷಣಕ್ಕೆ ಅಕ್ಕಪಕ್ಕ ದವರು ಮರದ ಮೇಲೆ ಇದ ವ್ಯಕ್ತಿ ದೇಹವನ್ನು ಕೆಳಗಡೆ ಇಳಿಸಿ ಭಟ್ಕಳ ಸರ್ಕಾರಿ ಕರೆ ತಂದು ಪರಿಶೀಲಿಸಿದಾಗ ವೈದ್ಯರು ಮೃತಪಟ್ಟಿದ ಬಗ್ಗೆ ಖಚಿತಪಡಿಸಿದ್ದಾರೆ.
ಈ ಬಗ್ಗೆ ಮೃತನ ಮಗ ಉಮೇಶ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣವನ್ನು ದಾಖಲಿಸಿ ಕೊಂಡ ಎ.ಎಸ್.ಐ ಕೃಷ್ಣಾನಂದ ನಾಯ್ಕ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ವ್ಯಕ್ತಿಯ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದ್ದು,ಮೃತರಿಗೆ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

error: