May 14, 2024

Bhavana Tv

Its Your Channel

ಭಟ್ಕಳದ ಆಸರಕೇರಿ ಶ್ರೀ ಭುವನೇಶ್ವರಿ ಕನ್ನಡ ಸಂಘ ಬೆಳ್ಳಿಮಹೋತ್ಸವ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆ ಕೋಟಿ ಕಂಠ ಗಾಯನ ಕಾರ್ಯಕ್ರಮ

ಭಟ್ಕಳದ ಆಸರಕೇರಿ ಶ್ರೀ ಭುವನೇಶ್ವರಿ ಕನ್ನಡ ಸಂಘ ಈ ಬಾರಿ ಬೆಳ್ಳಿಮಹೋತ್ಸವ ಆಚರಿಸಿಕೊಳ್ಳುತ್ತಿದ್ದು ಆ ಪ್ರಯುಕ್ತ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಸಿಕೊಡುವುದರ ಮೂಲಕ ಗಮನ ಸೆಳೆದರು.

ಭಟ್ಕಳ ಶಂಶುದ್ದೀನ್ ಸರ್ಕಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ 6 ಕನ್ನಡ ಗೀತೆಗಳನ್ನು ಪ್ರತಿಭಾವಂತ ಸಂಗೀತ ಗಾಯಕಿ ಜತೆ ಸೇರಿಕೊಂಡು ಸಂಘದ ಎಲ್ಲಾ ಸದಸ್ಯರು ಹಾಗೂ ಕನ್ನಡಾಭಿಮಾನಿಗಳು ಹಾಡಿದರು.
ಇದೇ ಸಂದರ್ಭದಲ್ಲಿ ಕನ್ನಡದ ರಕ್ಷಣೆ ಹಾಗೂ ಉಳಿವಿಗಾಗಿ ಪ್ರತಿಜ್ಞೆ ಕೂಡ ಮಾಡಲಾಯಿತು. ಪ್ರತೀಕ್ಷಾ ಪ್ರಕಾಶ ಶೇಟ್ ತನ್ನ ಕಂಠಸಿರಿಯಿAದ ಗಾಯನ ಹಾಡಿದಳು.ಕನ್ನಡ ಭುವನೇಶ್ವರಿ ಸಂಘದ ಕಾರ್ಯದರ್ಶಿ ಪಾಂಡುರAಗ ನಾಯ್ಕ, ಭಟ್ಕಳ, ಅರ್ಬನ್ ಬ್ಯಾಂಕ್ ನಿರ್ದೇಶಕ ಶ್ರೀಧರ ನಾಯ್ಕ ಆಸರಕೇರಿ, ಗುರುಕೃಪಾ ಸಂಘದ ನಿರ್ದೇಶಕ ವೆಂಕಟೇಶ ನಾಯ್ಕ, ಮಾಜಿ ಸೈನಿಕ ಶ್ರೀಕಾಂತ ನಾಯ್ಕ, ಕರಾಟೆ ಶಿಕ್ಷಕ ಈಶ್ವರ ನಾಯ್ಕ, ನಾಮಧಾರಿ ಸಮಾಜದ ಅಧ್ಯಕ್ಷ ಕೃಷ್ಣಾ ನಾಯ್ಕ ಆಸರಕೇರಿ, ಸೇರಿದಂತೆ ನಾಗರಿಕರು ಉಪಸ್ಥಿತರಿದ್ದರು.

error: