April 29, 2024

Bhavana Tv

Its Your Channel

ಕುಂಟವಾಣಿ ಪ್ರೌಢಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ

ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳಲಿರುವ ಅಪ್ಪಟ ಗ್ರಾಮೀಣ ಪ್ರತಿಭೆಗಳು

ಪಾತ್ರಾಭಿನಯ ಸ್ಪರ್ಧೆಯಲ್ಲಿ ಕುಂಟವಾಣಿ ಪ್ರೌಢಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ

ಭಟ್ಕಳ: ರಾಷ್ಟ್ರೀಯ ಜನ ಸಂಖ್ಯಾಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಡಿ.ಎಸ್.ಆರ್.ಟಿ.ಸಿ ಬೆಂಗಳೂರ ಇವರ ಆಶ್ರಯದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಬಳ್ಳಾರಿ ಇಲ್ಲಿ ನಡೆದ ರಾಜ್ಯಮಟ್ಟದ ಪಾತ್ರಾಭಿನಯ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಕುಂಟವಾಣಿತಾ|| ಭಟ್ಕಳ ಉತ್ತರಕನ್ನಡ ಇಲ್ಲಿಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಪ್ಪಟಗ್ರಾಮೀಣ ಭಾಗದ ಈ ವಿದ್ಯಾರ್ಥಿಗಳು ಎನ್.ಸಿ.ಆರ್.ಟಿ ನೇತೃತ್ವದಲ್ಲಿ ನವದೆಹಲಿಯಲ್ಲಿ ದಿನಾಂಕ 6/12/22 ರಿಂದ 9/12/22 ರ ವರೆಗೆ ನಡೆಯುವ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.ಶಾಲೆಯ ಮುಖ್ಯಾಧ್ಯಾಪಕರಾದ ವೀಣಾ ಸಭಾಹಿತ ಅವರ ಮಾರ್ಗದರ್ಶನದಲ್ಲಿ ಶಿಕ್ಷಕರ ಸಹಕಾರದೊಂದಿಗೆ ಹಿಂದಿ ಶಿಕ್ಷಕ ಆನಂದ ನಾಯ್ಕ ಅವರ ನಿರ್ದೇಶನದಲ್ಲಿ ವಿದ್ಯಾರ್ಥಿಗಳು ಈ ಸಾಧನೆ ಮಾಡಿರುತ್ತಾರೆ ವಿದ್ಯಾರ್ಥಿಗಳಾದ ಪೂಜಾ ಕೃಷ್ಣಗೊಂಡ, ಗಣೇಶ ರಾಜು ಶೆಟ್ಟಿ, ಅಂಕುಶ ಯೋಗೇಶ ಶೆಟ್ಟಿ, ಮಹೇಶ್ರೀ ನಾಗಪ್ಪ ಗೊಂಡ ಹಾಗೂ ಧನುಷ ಗೊಯ್ದ ಗೊಂಡ ಅವರು ಹಿಂದಿ ವಿಷಯದಲ್ಲಿ ಮಕ್ಕಳಲ್ಲಿ ಮೊಬೈಲ್ ಅತಿಯಾದ ಬಳಕೆಯಿಂದ ಆಗುವ ದೈಹಿಕ ಮತ್ತು ಮಾನಸಿಕ ಪರಿಣಾಮಗಳ ಬಗ್ಗೆ ಮಾಡಿದ ಮನೋಜ್ಞ ಅಭಿನಯ ನಿರ್ಣಾಯಕರು ಹಾಗೂ ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಯಿತು.

ಉತ್ತರಕನ್ನಡ ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಈಶ್ವರ ನಾಯ್ಕ ಡಯಟ್ ಪ್ರಾಂಶುಪಾಲರಾದ ಎನ್.ಜಿ.ನಾಯ್ಕ, ಭಟ್ಕಳ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ದೇವಿದಾಸ ಮೊಗೇರ್ ಹಾಗೂ ಕಾರ್ಯಕ್ರಮದ ಜಿಲ್ಲಾ ನೋಡಲ್ ಅಧಿಕಾರಿಯಾಗಿರುವ ಪರಮೇಶ್ವರ ಭಂಡಾರಿಯವರು ವಿದ್ಯಾರ್ಥಿಗಳ ಈ ಸಾಧನೆಯನ್ನು ಮುಕ್ತ ಕಂಠದಿAದ ಶ್ಲಾಘಿಸಿದ್ದಾರೆ ಜೊತೆಗೆ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಪಾಲಕ/ಪೋಷಕರು ಮಕ್ಕಳ ಸಾಧನೆಯನ್ನು ಅಭಿನಂದಿಸಿದ್ದಾರೆ.

error: