ಭಟ್ಕಳ:- ವಿದ್ಯಾರ್ಥಿಗಳಿಗೆ ವ್ಯವಹಾರದ ಜ್ಞಾನವನ್ನು ಪ್ರಾಯೋಗಿಕವಾಗಿ ಕಲಿಸುವ ನಿಟ್ಟಿನಲ್ಲಿ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ‘ಮಾರ್ಕೆಟ್ ಡೇ’ಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆರ್.ಎನ್.ಎಸ್ ಸಮೂಹ ಸಂಸ್ಥೆಗಳ ಆಡÀಳಿತಾಧಿಕಾರಿ ದಿನೇಶ ಗಾಂವಕರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ತಮ್ಮ ತಂಡವನ್ನು ರಚನೆ ಮಾಡಿಕೊಂಡು ತಮ್ಮ ಅಭಿರುಚಿಗೆ ತಕ್ಕಂತೆ ಅಂಗಡಿಗಳನ್ನು ತೆರೆದು, ಸಣ್ಣ ಬಂಡವಾಳವನ್ನು ಹೂಡಿ ಲಾಭ ಪಡೆಯುವ ಭಾವನಾತ್ಮಕ ಸಾಮಾಜಿಕ ಸಂಬAಧಗಳ ಮೌಲ್ಯವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಪದವಿ ಕಾಲೇಜಿನ ಪ್ರಾಚರ್ಯರಾದ ಡಾ|| ಸಂಜಯ ಕೆ.ಎಸ್ ಪ್ರಾಮಾಣಿಕತೆ ಹಾಗೂ ಶೃದ್ಧೆಯಿಂದ ದುಡಿದರೆ ಯಶಸ್ಸು ತಮ್ಮ ಕಡೆ ಬಂದೇ ಬರುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಚರ್ಯ ಮಾಧವ ಪಿ. ವಹಿಸಿದರು. ಅಶ್ವಿನಿ ಶೇಟ್ ಕಾರ್ಯಕ್ರಮ ನಿರ್ವಹಿಸಿದರು.
More Stories
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.
ಸಮುದ್ರ ಕಿನಾರೆಯಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಬಾಲಕರು ನೀರು