ಭಟ್ಕಳ:- ಸ್ವರ್ಣವಲ್ಲೀಯ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನವು ಹಮ್ಮಿಕೊಂಡ ಭಗವದ್ಗೀತಾ ಅಭಿಯಾನದ ಅಂಗವಾಗಿ ಆಯೋಜಿಸಿರುವ ಭಟ್ಕಳ ತಾಲೂಕಾ ಮಟ್ಟದ ಭಗವದ್ಗೀತಾ ಸ್ಪರ್ಧೆಗಳು ದಿ 28.11.2022 ರಂದು ಭಟ್ಕಳ ದ ಶ್ರೀ ನಾಗಯಕ್ಷೇ ದೇವಸ್ಥಾನದಲ್ಲಿ ಜರುಗಿದವು.
ಭಾಷಣ ಸ್ಪರ್ಧೆಯ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸೈಂಟ್ ಥಾಮಸ್ ಶಾಲೆಯ ಶ್ರೀಶಾ ಶ್ರೀಧರ ಶೇಟ್-ಪ್ರಥಮ, ಪ್ರೌಢಶಾಲಾ ವಿಭಾಗದಲ್ಲಿ ಶ್ರೀವಲಿ ಪ್ರೌಢಶಾಲೆಯ ಮೋನಿಕಾ ಜೆ ನಾಯ್ಕ-ಪ್ರಥಮ, ವಿದ್ಯಾಭಾರತಿ ಶಾಲೆಯ ಶ್ರೀಶ್ ಜಿ.ಕೆ ದ್ವಿತೀಯ ಸ್ಥಾನ ಪಡೆದರು.
ಗೀತ ಕಂಠಪಾಠ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾಭಾರತಿ ಶಾಲೆಯ ಅನಂತ ಹೆಬ್ಬಾರ, ಶ್ರೀವಲಿ ಪ್ರೌಢಶಾಲೆಯ ನಾಗಶ್ರೀ ಹೆಗಡೆ ತಾಲೂಕಾ ಮಟ್ಟದಲ್ಲಿ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡರು.
ನಿರ್ಣಾಯಕರಾಗಿ ಲೆಕ್ಕತಜ್ಞರಾದ ಬಿ.ಕೆ.ಪೈ, ಅರ್ಚಕರಾದ ಉದಯ ಜಿ ಪ್ರಭು ಆಗಮಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ರಾಮದಾಸ ಪ್ರಭುಗಳು “ಭಗವದ್ಗೀತೆಯು ನಮ್ಮ ಜೀವನದ ಎಲ್ಲಾ ಪ್ರಶ್ನೆಗಳಿಗೆ – ಕಷ್ಟಗಳಿಗೆ ಪರಿಹಾರ ನೀಡುವ ಗ್ರಂಥವಾಗಿದೆ. ಪ್ರತಿಮನೆಯಲ್ಲಿ ಪ್ರತಿದಿನ ಇದರ ಪಠಣವಾಗಬೇಕು” ಎಂದರು.
ಸಂಯೋಜಕರಾದ ಗಣಪತಿ ಶಿರೂರ, ಶ್ರೀನಾಥ ಪೈ, ಶಿಕ್ಷಕರಾದ ಶ್ರೀಧರ ಶೇಟ್, ರಮ್ಯಾ ನಾಯ್ಕ, ದೇವಸ್ಥಾನದ ಪ್ರಮುಖರಾದ ಶ್ರೀ ರಾಧಾಕೃಷ್ಣ ಪ್ರಭು, ಕೃಷ್ಣಾನಂದ ಪ್ರಭು, ವಿಘ್ನೇಶ ಪ್ರಭು ಹಾಗೂ ಇತರರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಶ್ರೀ ನಾಗಯಕ್ಷೇ ದೇವಸ್ಥಾನದ ವತಿಯಿಂದ ಸ್ಮರಣಿಕೆ, ನಗದು ಬಹುಮಾನವನ್ನು ವಿತರಿಸಲಾಯಿತು.
More Stories
ಸಮುದ್ರ ಕಿನಾರೆಯಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಬಾಲಕರು ನೀರು
ಮತದಾರರ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮುಂಬತ್ತಿ ಪ್ರಜ್ವಲನೆ ಕಾರ್ಯಕ್ರಮ
ಅರಬ್ಬೀ ಸಮುದ್ರದಲ್ಲಿ ಬೋಟ್ ಮುಳುಗಡೆ, ನಾಲ್ವರ ರಕ್ಷಣೆ