ಭಟ್ಕಳ:– ಒಂದು ಸಾವಿರ ವರ್ಷಗಳನ್ನ ಪೂರೈಸಿದ ಭಟ್ಕಳದ ಜಮಾತುಲ್ಲಾ ಮುಸ್ಲಿಮೀನ್ ಸಂಸ್ಥೆಯ ಸಹಸ್ರ ಶತಮಾನೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದು ಹಿಂದೂ ಮುಸ್ಲಿಂರ ಕೋಮು ಸೌಹಾರ್ದತೆಗೆ ಸಾಕ್ಷಿಯಾಯಿತು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೂಡಲಸಂಗಮದ ಬಸವಧರ್ಮಪೀಠದ ಬಸವಪ್ರಕಾಶ ಸ್ವಾಮೀಜಿ ಸೇರಿದಂತೆ ಹಲವು ಹಿಂದೂ ಮುಖಂಡರು ಸೌಹಾರ್ದತೆ ಭಾಗವಾಗಿ ಮಸೀದಿಗಳಿಗೆ ಭೇಟಿ ನೀಡಿ ಮುಸ್ಲಿಂರ ಪ್ರಾರ್ಥನೆ ವೀಕ್ಷಿಸಿದರು.
ವ್ಯಾಪಾರಕ್ಕಾಗಿ ಅರಬ್ ದೇಶದಿಂದ ಹಡಗುಗಳ ಮೂಲಕ ಆಗಮಿಸಿದ ಮುಸ್ಲಿಂ ಸಮುದಾಯದವರು ಭಟ್ಕಳದಲ್ಲಿ ನೆಲೆಸಿ ಬಳಿಕ ಆರಂಭಿಸಿದ್ದ ಜಮಾತುಲ್ಲಾ ಮುಸ್ಲಿಮೀನ್ ಭಟ್ಕಳ ಸಂಸ್ಥೆಯೂ ಇದೀಗ ಸಾವಿರ ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಭಟ್ಕಳ ಪಟ್ಟಣದ ಚಿನ್ನದಪಳ್ಳಿಯ ಮಸೀದಿ ಬಳಿ ಆಯೋಜಿಸಿದ್ದ ಈ ಸಹಸ್ರಮಾನೋತ್ಸವ ಕಾರ್ಯಕ್ರಮದಲ್ಲಿ ಹಿಂದೂ ಮುಸ್ಲಿಂ ಸಮುದಾಯದ ಧಾರ್ಮಿಕ ಗುರುಗಳು ಹಾಗೂ ರಾಜಕೀಯ ಮುಖಂಡರುಗಳು ಭಾಗವಹಿಸಿದ್ದರು. ಅಲ್ಲದೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೂಡಲಸಂಗಮದ ಬಸವಧರ್ಮಪೀಠದ ಬಸವಪ್ರಕಾಶ ಸ್ವಾಮೀಜಿ, ಮಾಜಿ ಶಾಸಕ ಜೆ.ಡಿ. ನಾಯ್ಕ ಮಸೀದಿಗೆ ಭೇಟಿ ನೀಡಿ ಮುಸ್ಲೀಂ ಸಮುದಾಯದವರ ಪ್ರಾರ್ಥನೆ ವೀಕ್ಷಣೆ ನಡೆಸಿದರು. ಬಳಿಕ ಮಾತನಾಡಿದ ಸ್ವಾಮೀಜಿ ದೇಶ ವಿಶ್ವಗುರುವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನು ಕೂಡ ವಿಶ್ವಗುರು ಆಗಿಲ್ಲ. ಹಿಂದು ಮುಸ್ಲಿಂ ಸಮುದಾಯದವರು ಸೌಹಾರ್ಧಯುತವಾಗಿ ಬದುಕಿದಾಗ ಅದು ಸಾಧ್ಯವಾಗಲಿದೆ. ರಾಜಕೀಯ ನಾಯಕರುಗಳು ತಮ್ಮ ಲಾಭಕ್ಕೋಸ್ಕರ ಧರ್ಮ ಧರ್ಮಗಳ ನಡುವೆ ಸುಳ್ಳು ಪ್ರಚಾರ ಮಾಡುತ್ತಾರೆ. ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ. ಇದೆಲ್ಲವನ್ನು ಬಿಟ್ಟು ನಾವೆಲ್ಲರು ಒಂದೇ ಎಂಬ ಭಾವನೆ ಮೂಡಿಸಬೇಕು ಎಂದು ಹೇಳಿದರು.
ಧರ್ಮವನ್ನು ಪ್ರೀತಿ ಮಾಡಬೇಕು. ಜೊತೆಗೆ ಇನ್ನೊಬ್ಬರನ್ನು ಪೀತಿಸಬೇಕು. ಕಾಣದ ದೇವರನ್ನು ಪ್ರೀತಿಸುವ ಮೊದಲು ಕಾಣುವ ಮನಸ್ಸರನ್ನು ಪ್ರೀತಿಸಬೇಕಾಗಿದೆ. ನಮ್ಮೆಲ್ಲರ ಮೈಯಲ್ಲಿ ಹರಿಯುವುದು ಒಂದೇ ರಕ್ತ ಎಂಬುದನ್ನು ನಾವೆಲ್ಲರು ತಿಳಿದುಕೊಳ್ಳಬೇಕು. ನಾವೆಲ್ಲರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನೀಡಿರುವ ಸಂವಿಧಾನದ ಅಡಿಯಲ್ಲಿ ಬದುಕುತ್ತಿದ್ದೇವೆ ಎಂದರು.
ಹಿAದೂ, ಮುಸ್ಲೀಂ ಕ್ರಿಶ್ಚಿಯನ್ ಎಲ್ಲವನ್ನು ನಮ್ಮ ಮನೆಯಲ್ಲಿ ಮನಸ್ಸಿನಲ್ಲಿ ಇಟ್ಟುಕೊಂಡು ಹೊರಗಡೆ ಬಂದಾಗ ನಾವೆಲ್ಲರು ಭಾರತೀಯರು ಎಂದು ತಿಳಿಯಬೇಕಾಗಿದೆ. ಹಿಂದೂ, ಮುಸ್ಲಿಂರು ದ್ವೇಷ ಬಿಟ್ಟು ಸಹಬಾಳ್ವೆಯಿಂದ ಬದುಕಿದಾಗ ಭಾರತಾಂಭೆ ಕೂಡ ಸುಖವಾಗಿ ಇರುತ್ತಾಳೆ. ಮುಸ್ಲಿಂ, ಕ್ರಿಶ್ಚಿಯನ್ ಭಾರತದ ದತ್ತು ಪುತ್ರರಾಗಿದ್ದು ಅವರೆಲ್ಲರು ನಮ್ಮ ಸಹೋದರರಾಗಿದ್ದಾರೆ ಎಂದು ಹೇಳಿದರು.
More Stories
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು:
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ ೪೧ ನೇ ವಾರ್ಷಿಕ ಅಥ್ಲೆಟಿಕ್ ಮೀಟ್
ಸಿದ್ದಾರ್ಥ ಆಂಗ್ಲ ಮಾದ್ಯಮ ಪ್ರೌಢಶಾಲೆ ಶಿರಾಲಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಉತ್ತಮ ಸಾಧನೆ