ಭಟ್ಕಳ: ಪ್ರವಾಸಕ್ಕಾಗಿ ಮುರುಡೇಶ್ವರಕ್ಕೆ ಬಂದು ಸಮುದ್ರ ತೀರದಲ್ಲಿ ತಮ್ಮ ೨ ಉಂಗುರ, ಬಂಗಾರದ ಸರ. ೧ ಮೊಬೈಲ್ ಫೋನ್ ಮತ್ತು ಸಾವಿರ ರುಪಾಯಿಯನ್ನು ಕಳೆದುಕೊಂಡು ಪರಿತಪಿಸುತ್ತಿದ್ದ ಪ್ರವಾಸಿಗರೋರ್ವರಿಗೆ ಎಲ್ಲ ಸ್ವತ್ತುಗಳನ್ನು ಹಿಂದಿರುಗಿಸಿ ಮುರುಡೇಶ್ವರ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.
ಹೊನ್ನಾವರ ಮೂಲದ ಪ್ರಮೋದ ರಾಮಚಂದ್ರ ಜಾಧವ ಎನ್ನುವವರು ಮುರುಡೇಶ್ವರ ಸಮುದ್ರ ದಡದಲ್ಲಿ ಓಡಾಡಿಕೊಂಡಿದ್ದ ಸಂದರ್ಭದಲ್ಲಿ ತಮ್ಮ ಸ್ವತ್ತುಗಳನ್ನು ಕಳೆದುಕೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಮೊಬೈಲ್ ಫೋನ್ ಲೊಕೇಶನ್ ಆಧಾರದಲ್ಲಿ ಎಲ್ಲ ಸ್ವತ್ತುಗಳನ್ನು ಪತ್ತೆ ಹಚ್ಚಿ ಹಿಂದಿರುಗಿಸಿದ್ದಾರೆ. ಮುರುಡೇಶ್ವರ ಪಿಎಸ್ಐ ದೇವರಾಜ್ ಬಿರಾದಾರ. ಸಿಬ್ಬಂದಿಗಳಾದ ಮುರುಳಿ ಮತ್ತು ಬಿಲಾಲ್ ಪತ್ತೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು
More Stories
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು:
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ ೪೧ ನೇ ವಾರ್ಷಿಕ ಅಥ್ಲೆಟಿಕ್ ಮೀಟ್
ಸಿದ್ದಾರ್ಥ ಆಂಗ್ಲ ಮಾದ್ಯಮ ಪ್ರೌಢಶಾಲೆ ಶಿರಾಲಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಉತ್ತಮ ಸಾಧನೆ