ಭಟ್ಕಳ ತಾಲ್ಲೂಕಿನ ಬೈಲೂರಿನ ಮಡಿಕೇರಿಯಲ್ಲಿರುವ ಗೋಪಾಲಕೃಷ್ಣ ಗೋಶಾಲೆಯು ಅನುದಾನ ಕೊರತೆಯಿಂದ ಗೋವು ಪಾಲನೆಗೆ ಕಷ್ಟಪಡುತ್ತಿದೆ. ಮೇವು ಖರೀದಿಗೂ -ಹಣ ಇಲ್ಲದೆ ಹಸುಗಳು ಸೊರಗುತ್ತಿವೆ.
ರಸ್ತೆಯಲ್ಲಿ ತಿರುಗುವ ಬಿಡಾಡಿ ದನಗಳನ್ನು ಹಾಗೂ ಕಸಾಯಿಖಾನೆಗೆ ಸಾಗಿಸುವಾಗ ಸಿಕ್ಕಿಬಿದ್ದ ದನಗಳನ್ನು ಪೊಲೀಸರು ಈ ಗೋಶಾಲೆಗೆ ತಂದು ಬಿಡುತ್ತಾರೆ. ಅಂತಹ ದನಗಳನ್ನು ಈ ಗೋಶಾಲೆಯಲ್ಲಿ ಪೋಷಿಸಲಾಗುತ್ತಿದೆ. 2016 ರಲ್ಲಿ ಗೋಪಾಲಕೃಷ್ಣ ಗೋಶಾಲಾ ಟ್ರಸ್ಟ್ ಆರಂಭಿಸಿದ್ದ ಈ ಗೋಶಾಲೆಯು ದಾನಿಗಳ ಸಹಕಾರದೊಂದಿಗೆ ನಿರ್ವಹಣೆ ಆಗುತ್ತಿದೆ.
‘ಈಚೆಗೆ ಗೋ ಪೋಷಣೆಗೆ ಅಗತ್ಯವಾದ ಹಿಂಡಿ, ಹುಲ್ಲು ಸೇರಿದಂತೆ ಮೇವು ಪದಾರ್ಥಗಳನ್ನು ಖರಿದಿಸಲು
ಅನುದಾನ ಕೊರತೆ ಆಗುತ್ತಿದೆ. ಗೋಶಾಲೆಯಲ್ಲಿ ಇರುವ ಅಂದಾಜು 65 ಕ್ಕೂ ಹೆಚ್ಚು ಗೋವುಗಳು ಮೇವು ಹಿಂಡಿ ಸರಿಯಾಗಿ ಸಿಗದೇ ಹಸಿವಿನಿಂದ ಬಳಲುವಂತಾಗಿದೆ’ ಎಂದು ಗೋಶಾಲೆ ನಿರ್ವಹಿಸುತ್ತಿರುವ ಸಿಬ್ಬಂದಿ ಅಳಲು
ತೊಡಗಿಕೊಂಡರು.
ಹಸುಗಳಿAದ ಹಾಲಿನ ಇಳುವರಿ ಕಡಿಮೆ ಇದೆ. ಈ ಹಸುಗಳ ಹಾಲಿನಿಂದ ಪ್ರತಿದಿನ ರೂ 750 ಆದಾಯ ಇದ್ದರೆ ಮೇವು ಹಿಂಡಿ ಸೇರಿದಂತೆ ಅಂದಾಜು ಮೂರು ಸಾವಿರಕ್ಕೂ ಹೆಚ್ಚು ಖರ್ಚು ಬರುತ್ತದೆ. ಕೋವಿಡ್ ಸಂದರ್ಭದಲ್ಲಿ ಸರ್ಕಾರ ಗೋವು ಪಾಲನೆಗಾಗಿ 1 ಲಕ್ಷ ಅನುದಾನ ನೀಡಿತ್ತು. ಧರ್ಮಸ್ಥಳದ ವಿರೇಂದ್ರ ಹೆಗ್ಗಡೆಯವರು ನಮ್ಮ ಗೋಶಾಲೆಯ ಬಗ್ಗೆ ಸಮೀಕ್ಷೆ ನಡೆಸಿ ಅಂದಾಜು 75 ಸಾವಿರ ಅನುದಾನ ಬಿಡುಗಡೆ ಮಾಡಿದ್ದರು. ಅದರ ಹೊರತಾಗಿ ಬೇರೆ ನೆರವು ಸರ್ಕಾರದಿಂದ ಬಂದಿಲ್ಲ’ ಎನ್ನುತ್ತಾರೆ.
ಪುಣ್ಯಕೋಟಿ ನಿಧಿಯಡಿ ಸರ್ಕಾರ ನಮ್ಮ ಗೋಶಾಲೆಯನ್ನು ಪರಿಗಣಿಸಿ ತಕ್ಷಣಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಗೋಪಾಲಕೃಷ್ಣ ಗೋಶಾಲಾ ಟ್ರಸ್ಟ್ನ ಅಧ್ಯಕ್ಷ ವಿಷ್ಣು ನಾಯ್ಕ ತಿಳಿಸಿದ್ದಾರೆ.
ದಾನಿಗಳು ತಮ್ಮ ಸಹಾಯವನ್ನು ಈ ಕೆಳಗಿನ ಖಾತೆಗೆ . ಶ್ರೀ ಗೋಪಾಲಕೃಷ್ಣ ಗೋಶಾಲಾ ಟ್ರಸ್ಟ್ ಮಡಿಕೇರಿ, ಬೈಲೂರು, ತಾ|| ಭಟ್ಕಳ (ಉ.ಕ.) 581 350, ಶ್ರೀ ಗೋಪಾಲಕೃಷ್ಣ ಗೋಶಾಲಾ ಟ್ರಸ್ಟ್ ಕೆನರಾ ಬ್ಯಾಂಕ್, ಮುರ್ಡೇಶ್ವರ ಬ್ರಾಂಚ್ A/c No. 03102200204454
IFSC Code: CNRB-0010310 ನೀಡಬಹುದಾಗಿದೆ.
More Stories
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು:
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ ೪೧ ನೇ ವಾರ್ಷಿಕ ಅಥ್ಲೆಟಿಕ್ ಮೀಟ್
ಸಿದ್ದಾರ್ಥ ಆಂಗ್ಲ ಮಾದ್ಯಮ ಪ್ರೌಢಶಾಲೆ ಶಿರಾಲಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಉತ್ತಮ ಸಾಧನೆ