ಭಟ್ಕಳ ; ತಾಲೂಕಿನ ಮುಟ್ಟಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಮುಟ್ಟಳ್ಳಿ ಬೂತ ನಂ 190ರಲ್ಲಿ ಬೆಳಿಗ್ಗೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತ ಹಲ್ಲೆ ನಡೆಸಿದ್ದು ಇದರಿಂದ ಸ್ಥಳದಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದರು. ಅದಾದ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಮಂಕಾಳ ವೈದ್ಯರು ಪರೀಶೀಲನೆ ನಡೆಸಲು ತೆರಳಿದ್ದರು. ಆಸಂದರ್ಬದಲ್ಲಿ ಅಲ್ಲಿದ್ದ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಜಯಘೋಷ ಕೂಗುತ್ತಿದ್ದರು. ಇದನ್ನು ಕೇಳಿದ ಕಾಂಗ್ರೆಸ್ ಕಾರ್ಯಕರ್ತರು ಮಂಕಾಳ ವೈದ್ಯರಿಗೆ ಜೈಕಾರ ಹಾಕಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತವರಣ ಏರ್ಪಟ್ಟಿತ್ತು ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಇದರಿಂದ ಜನರು ಮತ್ತಷ್ಟು ರೊಚಿಗೆದ್ದಿದ್ದಾರೆ. ಪರಿಸ್ಥಿತಿ ಕೈ ಮೀರುವ ಹಂತಕ್ಕೆ ಹೋಗಿದ್ದು ಸ್ಥಳಕ್ಕೆ ಡಿವೈಎಸ್ಪಿ ಶ್ರೀಕಾಂತ ಕೆ, ಸಿಪಿಐ ಗೋಪಿಕೃಷ್ಣ ಆಗಮಿಸಿ ಜನರನ್ನು ಸಮಾಧಾನ ಪಡಿಸಿದ್ದಾರೆ. ಸ್ಥಳದಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜಿಸಲಾಗಿದ್ದು ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.
ಮುಟ್ಟಳ್ಳಿ ಪಂಚಾಯಿತಿ ವ್ಯಾಪ್ತಿಯ ಬೂತ ನಂ 192 ರಲ್ಲೂ ಇಂತಹುದೆ ಪ್ರಕರಣ ದಾಖಲಾಗಿತ್ತು. ಚುನಾವಣಾಧಿಕಾರಿಗಳಿಗೆ ದೂರು ತೆರಳಿದ ಬಳಿಕ ಎಸಿ ಮಮತಾದೇವಿ ಎಸ್ ಸ್ಥಳಕ್ಕೆ ತೆರಳಿದ್ದಾರೆ. ಪರೀಶೀಲನೆ ನಡೆಸಿ ಎಲ್ಲವೂ ಸರಿಯಿದೆ ಎಂದು ಖಚಿತಪಡಿಸಿಕೊಂಡು ಬಳಿಕ ತೆರಳಿದ್ದಾರೆ. ತಲಗೋಡ ಬೂತನಲ್ಲೂ ಬಿಜೆಪಿ ಕಾರ್ಯಕರ್ತ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದ್ದು ಅಲ್ಲಿಯೂ ಪೊಲೀಸ್ ಬಂದೊಬಸ್ತ ಹೆಚ್ಚಿಸಲಾಗಿತ್ತು.
More Stories
ಕುಂದಾಪುರದಲ್ಲಿ ನಡೆದ ಸಾವಿಷ್ಕಾರ್ ಫೆಸ್ಟ್ ನಲ್ಲಿ ಉತ್ತಮ ಹೆಸರು ಗಳಿಸಿದ ಅಂಜುಮನ್ ಇಂಜಿನಿಯರಿ0ಗ್ ವಿದ್ಯಾರ್ಥಿಗಳು
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ