May 4, 2024

Bhavana Tv

Its Your Channel

ಭಟ್ಕಳದಲ್ಲಿ ಪತ್ನಿಗೆ ಚೂರಿ ಇರಿದು ಪರಾರಿ, ಗಾಯಗೊಂಡ ಮಹಿಳೆ ಮಣಿಪಾಲ ಆಸ್ಪತ್ರೆಗೆ ದಾಖಲು

ಭಟ್ಕಳ: ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಖಚಿತಪಡಿಸಿಕೊಂಡ ವ್ಯಕ್ತಿಯೋರ್ವ ತನ್ನ ಪತ್ನಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿ ನಂತರ ಅಲ್ಲಿಂದ ಪರಾರಿಯಾಗಿರುವ ಘಟನೆ ಪುರಸಭಾ ವ್ಯಾಪ್ತಿಯ ಮುಷ್ಮಾ ಸ್ವೀಟ್‌ನಲ್ಲಿ ನಡೆದಿದೆ.
ಗಾಯಗೊಂಡ ಮಹಿಳೆಯನ್ನು ರುಖಿಯಾ ರೆಹಾನಾ (೨೬) ಎಂದು ಗುರುತಿಸಲಾಗಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ಆಕೆಯನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ಆಕೆಯ ಪತಿ ಝಾಹೀರ್ ಖಾನ್ ಸ್ಥಳದಿಂದ ಪರಾರಿಯಾಗಿದ್ದಾನೆ. ಈತನೊಂದಿಗೆ ರುಖಿಯಾ ಕಳೆದ ೬ ವರ್ಷಗಳ ಹಿಂದೆಯೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಇಬ್ಬರಿಗೂ ೩ ವರ್ಷದ ಮಗನಿದ್ದಾನೆ. ಕಳೆದ ಕೆಲವು ತಿಂಗಳಿನಿAದ ಇಬ್ಬರ ನಡುವೆ ಮನಸ್ತಾಪ ತಲೆದೋರಿ ಗಂಡ ಹೆಂಡತಿ ಇಬ್ಬರೂ ಪ್ರತ್ಯೇಕವಾಗಿ ನೆಲೆಸಿದ್ದರು ಎಂದು ತಿಳಿದು ಬಂದಿದೆ. ಸಂಜೆ ರುಖಿಯಾ ಅವರ ತಾಯಿ ಹಾಗೂ ಸಹೋದರಿ ಕೆಲಸದ ನಿಮಿತ್ತ ಭಟ್ಕಳದಿಂದ ಹೊರಗೆ ಪ್ರಯಾಣಿಸಿರುವುದನ್ನು ಖಚಿತಪಡಿಸಿಕೊಂಡ ಝಾಹೀರ್ ಖಾನೆ ಏಕಾಏಕಿ ಮನೆಗೆ ನುಗ್ಗಿ ಈ ಕುಕೃತ್ಯ ಎಸಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಭಟ್ಕಳ ಶಹರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ.

error: