ಭಟ್ಕಳ: 2023 ನೇ ಸಾಲಿನ ರಾಷ್ಟçಮಟ್ಟದ ಕಂಪನಿ ಸೆಕ್ರೇಟರಿ – ಸಿ.ಎಸ್ ಪರೀಕ್ಷೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ದೀಕ್ಷಿತ ಶ್ರೀಧರ ಮೊಗೇರ (ಬಿ.ಕಾಂ – ದ್ವಿತೀಯ), ಕಪ್ಸಿ ಮೊಹಮ್ಮದ ಇರ್ಬಾಜ್ (ಬಿ.ಕಾಂ – ಪ್ರಥಮ) ತೇರ್ಗಡೆ ಹೊಂದುವ ಮೂಲಕ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ತನ್ಮೂಲಕ ಸಿ.ಎಸ್ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗಗನಕುಸುಮವಲ್ಲ ಎಂದು ಸಾಬೀತುಪಡಿಸುವುದರೊಂದಿಗೆ, ಸಿಎಸ್ ಆಕಾಂಕ್ಷಿಗಳಿಗೆ ಭವಿಷತ್ತಿನಲ್ಲಿ ಶ್ರೀ ಗುರು ಸುಧೀಂದ್ರ ಕಾಲೇಜು ಹೊಸ ಆಶಾಕಿರಣವನ್ನು ಮೂಡಿಸಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಭಟ್ಕಳ ಎಜುಕೇಶನ್ ಟ್ರಸ್ಟ್’ನ ಛೇರಮನ್ ಡಾ. ಸುರೇಶ ನಾಯಕ, ಮ್ಯಾನೇಜಿಂಗ್ ಟ್ರಸ್ಟೀ ರವೀಂದ್ರ ಕೊಲ್ಲೆ, ಟ್ರಸ್ಟೀ ಮ್ಯಾನೇಜರ್ ರಾಜೇಶ ನಾಯಕ, ಇತರ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಹೃತ್ಪೂರ್ವಕವಾಗಿ ಅಭಿನಂದಿಸಿರುತ್ತಾರೆ. ಸಿ.ಎ-ಸಿ.ಎಸ್-ಸಿ.ಎಂ.ಎ ತರಬೇತಿಯ ಸಂಯೋಜಕರಾದ ಫಣಿಯಪ್ಪಯ್ಯ ಹೆಬ್ಬಾರ ರವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
More Stories
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.
ಸಮುದ್ರ ಕಿನಾರೆಯಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಬಾಲಕರು ನೀರು
ಮತದಾರರ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮುಂಬತ್ತಿ ಪ್ರಜ್ವಲನೆ ಕಾರ್ಯಕ್ರಮ