May 3, 2024

Bhavana Tv

Its Your Channel

ಭಟ್ಕಳ ಹೂತ್ಕಳದ ಧನ್ವಂತರಿ ವಿಷ್ಣುಮೂರ್ತಿ ದೇವರು ಹೂತ್ಕಳ ಧನ್ವಂತರಿ ದೇವರಿಗೆ ಇಂದು ಲಕ್ಷ ತುಳಸಿ ಅರ್ಚನೆ

ಭಟ್ಕಳ ; ತಾಲೂಕಿನ ಮಾರುಕೇರಿಯ ಹೂತ್ಕಳದ ಶ್ರೀ ಕ್ಷೇತ್ರ ಧನ್ವಂತರಿ ವಿಷ್ಣುಮೂರ್ತಿ ಶ್ರೀ ವಿಘ್ನೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿಯAತೆ ಲೋಕಕಲ್ಯಾಣಾರ್ಥವಾಗಿ ಪ್ರಥಮ ಏಕಾದಶಿಯ ದಿನವಾದ ಜೂನ್ 29 ಗುರುವಾರದಂದು ಶ್ರೀ ಧನ್ವಂತರಿ ವಿಷ್ಣುವಿಗೆ ಲಕ್ಷ ತುಳಸಿ ಅರ್ಚನೆ ಹಾಗೂ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ ಏರ್ಪಡಿಸಲಾಗಿದೆ.
ಆ ಪ್ರಯುಕ್ತ ಗುರುವಾರ ಬೆಳಿಗ್ಗೆ ವಿಘ್ನೇಶ್ವರ ದೇವರ ಸನ್ನಿಧಿಯಲ್ಲಿ ಅಭಿಷೇಕದೊಂದಿಗೆ ಸಹಸ್ರದೂರ್ವಾರ್ಚನೆ, ವಿಶೇಷ ಅಲಂಕಾರ ಪೂಜೆ ಹಾಗೂ ಧನ್ವಂತರಿಯಲ್ಲಿ ಶ್ರೀಸೂಕ್ತ, ಪುರುಷಸೂಕ್ತಾದಿ ವಿಶೇಷ ಅಭಿಷೇಕಗಳು, ಕಲ್ಪೋಕ್ತ ಸಹಸ್ರನಾಮ, ಲಕ್ಷ ತುಳಸಿ ಅರ್ಚನೆ ಹಾಗೂ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ , ಮಹಾಮಂಗಳಾರತಿ, ಪ್ರಸಾದ ವಿತರಣೆ, ಮಧ್ಯಾಹ್ನ ಉಪಹಾರ ಏರ್ಪಡಿಸಲಾಗಿದೆ. ಸಂಜೆ 4.30ಕ್ಕೆ ಸ್ಥಳೀಯ ಕಲಾವಿದರಿಂದ ರಾವಣವಧೆ ಯಕ್ಷಗಾನ ತಾಳಮದ್ದಲೆ ಏರ್ಪಡಿಸಲಾಗಿದ್ದು, ಈ ಎಲ್ಲಾ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಪ್ರಧಾನ ಅರ್ಚಕ ಶಂಕರ ಭಟ್ಟ ಮತ್ತು ಆಡಳಿತ ಮಂಡಳಿ ಪ್ರಮುಖರು ಪ್ರಕಟಣೆಯಲ್ಲಿ ಕೋರಿದ್ದಾರೆ.

error: