ಭಟ್ಕಳ ; ಪ್ರತಿಷ್ಟಿತ ಜನತಾ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಉಪಾಧ್ಯಕ್ಷರಾಗಿ ಪರಮೇಶ್ವರ ದೇವಡಿಗ ಅವಿರೋಧವಾಗಿ ಆಯ್ಕೆಯಾದರು.
ಜನತಾ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಪ್ರಧಾನ ಕಚೇರಿಯಲ್ಲಿ ಶನಿವಾರ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಈ ಹಿಂದಿನ ಅವಧಿಯಲ್ಲೂ ಸಹ ಮಂಕಾಳ ವೈದ್ಯ ಅಧ್ಯಕ್ಷ ಹಾಗೂ ಪರಮೇಶ್ವರ ದೇವಡಿಗ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಇತ್ತೀಚೆಗೆ ಸೊಸೈಟಿಯ ೧೩ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಚಿವ ಮಂಕಾಳ ವೈದ್ಯರ ನೇತೃತ್ವದ ತಂಡವೇ ಪುನಾಯ್ಕೆಯಾಗಿತ್ತು. ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ಚುನಾವಣಾಧಿಕಾರಿಯಾಗಿ ಕಾರವಾರದ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಸುಮನಾ ನಾಯ್ಕ ಕಾರ್ಯನಿರ್ವಹಿಸಿದರು.
ಈ ಸಂದರ್ಭದಲ್ಲಿ ಸೊಸೈಟಿಯ ಎಲ್ಲಾ ನಿರ್ದೇಶಕರು, ಪ್ರಭಾರೆ ಪ್ರಧಾನ ವ್ಯವಸ್ಥಾಪಕ ನಾಗೇಶ ದೇವಡಿಗ ಮುಂತಾದವರಿದ್ದರು. ಅಧ್ಯಕ್ಷ-ಉಪಾಧ್ಯಕ್ಷರಿಗೆ ನಿರ್ದೇಶಕರು, ಅವರ ಅಭಿಮಾನಿಗಳು ಹೂವಿನ ಮಾಲೆ ಹಾಕಿ ಶುಭ ಹಾರೈಸಿದರು.
More Stories
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.
ಸಮುದ್ರ ಕಿನಾರೆಯಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಬಾಲಕರು ನೀರು