May 13, 2024

Bhavana Tv

Its Your Channel

ಕು.ನಂದಿನಿ ನಾಯ್ಕ ರಾಜ್ಯ ಮಟ್ಟಕ್ಕೆ ಆಯ್ಕೆ

ಮುರ್ಡೇಶ್ವರ ;ವಿಜಯಪುರದ ಇಂಡಿಯಲ್ಲಿ ನಡೆದ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಆರ್.ಎನ್. ಶೆಟ್ಟಿ ಪದವಿ ಪೂರ್ವ ಮಹಾವಿದ್ಯಾಲಯ, ಮುರುಡೇಶ್ವರದ ವಿದ್ಯಾರ್ಥಿನಿ ಕು.ನಂದಿನಿ ನಾಯ್ಕ ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವುದರ ಮುಖಾಂತರ ಸಂಸ್ಥೆಗೆ, ತಾಲೂಕಿಗೆ ಹಾಗೂ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾಳೆ. ಈ ವಿದ್ಯಾರ್ಥಿನಿಗೆ ಆಡಳಿತ ಅಧಿಕಾರಿ ಪ್ರೊ.ದಿನೇಶ್ ಗಾಂವಕರ್, ಪ್ರಾಚಾರ್ಯೆ ಶ್ರೀಮತಿ ಅಶ್ವಿನಿ ಶೇಟ್, ಆರ್. ಎನ್. ಎಸ್ ಆಡಳಿತ ಮಂಡಳಿ, ಎಲ್ಲಾ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

error: