May 15, 2024

Bhavana Tv

Its Your Channel

ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ

ಭಟ್ಕಳ : ಬೆಂಗಳೂರಿನ ಕ್ಯೂ ಸ್ಪೈಡರ್ಸ್ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಭಟ್ಕಳದ ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನ 15 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಕಂಪ್ಯೂಟರ್ ಸೈನ್ಸ್ ವಿಭಾಗದವರು, 2 ವಿದ್ಯಾರ್ಥಿಗಳು ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿAಗ್ ವಿಭಾಗದವರು ಮತ್ತು 1 ವಿದ್ಯಾರ್ಥಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿAಗ್ ವಿಭಾಗದವರಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕ್ಯೂ ಸ್ಪೈಡರ್ಸ್ ನಿಂದ ಇತ್ತೀಚಿನ ತಂತ್ರಜ್ಞಾನಗಳಲ್ಲಿ ಉಚಿತ ತರಬೇತಿಯನ್ನು ನೀಡಿ ತರಬೇತಿಯ ನಂತರ ಉದ್ಯೋಗಾವಕಾಶ ನೀಡಲಾಗುತ್ತದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ,ಪ್ರಾAಶುಪಾಲ ಡಾ.ಫಜಲುರ್ ರಹಮಾನ್, ರೆಜಿಸ್ಟ್ರಾರ್ ಪ್ರೊ.ಜಾಹಿದ್ ಖರೂರಿ, ಪ್ಲೇಸ್ ಮೆಂಟ್ ಅಧಿಕಾರಿ ಪ್ರೊ. ಶ್ರೀಶೈಲ್ ಭಟ್, ಹಾಗೂ ಉಳಿದ ಶಿಕ್ಷಕರು ಅಭಿನಂದಿಸಿದ್ದಾರೆ ಎಂದು ಮಾಧ್ಯಮ ಸಂವಹನಾಧಿಕಾರಿ ಪ್ರೊಫೆಸರ್ ಸುಬ್ರಹ್ಮಣ್ಯ ಗಜಾನನ ಭಾಗವತ್, ಮಾಧ್ಯಮ ಗಳಿಗೆ ತಿಳಿಸಿದ್ದಾರೆ

error: