May 19, 2024

Bhavana Tv

Its Your Channel

ಕುಂದಾಪುರದಲ್ಲಿ ನಡೆದ ಸಾವಿಷ್ಕಾರ್ ಫೆಸ್ಟ್ ನಲ್ಲಿ ಉತ್ತಮ ಹೆಸರು ಗಳಿಸಿದ ಅಂಜುಮನ್ ಇಂಜಿನಿಯರಿ0ಗ್ ವಿದ್ಯಾರ್ಥಿಗಳು

ಭಟ್ಕಳ : ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ಭಟ್ಕಳದ ವಿದ್ಯಾರ್ಥಿಗಳಾದ ಮೊಹಮ್ಮದ್ ಇಸ್ಮಾಯಿಲ್ (4ನೇ ವರ್ಷದ ಮೆಕ್ಯಾನಿಕಲ್), ಜುರೈಫ್ ಅಹ್ಮದ್ ಮತ್ತು ಮೊಹಮ್ಮದ್ ಮೀರಾನ್ ಮೊಹ್ತಿಶಾಮ್ (2ನೇ ವರ್ಷದ ಎಲೆಕ್ಟ್ರಾನಿಕ್ಸ್) , ಎಂಐಟಿ ಕುಂದಾಪುರದಲ್ಲಿ ನಡೆದ ಸಾವಿಷ್ಕಾರ್ ಫೆಸ್ಟ್ನಲ್ಲಿ ಭಾಗವಹಿಸಿ ಓವರಾಲ್ ಚಾಂಪಿಯನ್‌ಶಿಪ್‌ನಲ್ಲಿ ಉತ್ತಮ ಹೆಸರು ಗಳಿಸಿದರು. ಅವರು 3 ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನ ಪಡೆದರು. ಎಐಟಿಎಂ ಮ್ಯಾನೇಜ್‌ಮೆಂಟ್, ಎಐಟಿಎಂ ಪ್ರಾಂಶುಪಾಲ ಡಾ.ಫಜಲುರ್ ರೆಹಮಾನ್ ಕೆ, ರಿಜಿಸ್ಟ್ರಾರ್ ಪ್ರೊ.ಜಾಹಿದ್ ಖರೂರಿ, ಮಾಧ್ಯಮ ಸಂಯೋಜಕ ಪ್ರೊ.ಸುಬ್ರಹ್ಮಣ್ಯ ಗಜಾನನ ಭಾಗವತ್ ಮತ್ತಿತರರು ಈ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

error: