ಭಟ್ಕಳ ; ತಾಲೂಕಿನ ಕಡವಿನಕಟ್ಟೆ ಹೊಳೆಯಲ್ಲಿ ಈಜಲು ತೆರಳಿದ ವೇಳೆ ಆಕಸ್ಮಿಕವಾಗಿ ನೀರಲ್ಲಿ ಮುಳುಗುತ್ತಿದ್ದ ಯುವಕನ್ನು ರಕ್ಷಣೆ ಮಾಡಲು ತೆರಳಿದ ಮಹಿಳೆ
ಮಹಿಳೆ ಸೇರಿ ಯುವಕ ಕೂಡ ಸಾವನ್ನಪ್ಪಿರುವ ಘಟನೆ ಕಡವಿನಕಟ್ಟೆ ಸಮೀಪ ನಡೆದಿದೆ.
ಮೃತ ಮಹಿಳೆಯನ್ನು ಪಾರ್ವತಿ ಶಂಕರ ನಾಯ್ಕ ಹಾಗೂ ಯುವಕ ಸೂರಜ್ ಪಾಂಡು ನಾಯ್ಕ ಕಂಡೆಕೋಡ್ಲು ನಿವಾಸಿ ಎಂದು ತಿಳಿದು ಬಂದಿದೆ. ಇವರು ಐವರು ಸೇರಿಕೊಂಡು ಕಡವಿಕಟ್ಟೆ ಡ್ಯಾಂ ಸಮೀಪ ಸ್ವಲ್ಪ ದೂರದಲ್ಲಿ ಈಜಲು ತೆರಳಿದ್ದರು. ಹೊಳೆಯಲ್ಲಿ ಈಜುತ್ತಿರುವ ವೇಳೆ ಸೂರಜ್ ನೀರಿನಲ್ಲಿ ಮುಳುಗುತ್ತಿದ್ದನು ಗಮನಿಸಿದ ಪಾರ್ವತಿ ನಾಯ್ಕ ಈತನ ರಕ್ಷಣೆಗೆ ಮುಂದಾಗಿದ್ದಾಳೆ. ಈ ವೇಳೆ ದುರ್ದೈವ ಎಂಬAತೆ ಈ ಮಹಿಳೆ ಕೂಡ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾಳೆ. ಸದ್ಯ ಇಬ್ಬರ ಮೃತ ದೇಹವನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಉತ್ತರ ಕನ್ನಡ ಹಾಗೂ ಭಟ್ಕಳ ಘಟಕ ವತಿಯಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ.
ಧರಣಿಯನ್ನು ಕೈ ಬಿಡುವಂತೆ ಪ್ರತಿಭಟಕಾರರ ಮನವಲಿಸಲು ಪ್ರಯತ್ನಿಸಿದ ಸಹಾಯಕ ಆಯುಕ್ತೆ ಡಾ. ನಯನ
ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಭಟ್ಕಳವತಿಯಿಂದ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಮೆರವಣಿಗೆ ಮೂಲಕ ಬಂದು ಸಹಾಯಕ ಆಯುಕ್ತರಿಗೆ ಮನವಿ.