ದಾಂಡೇಲಿ: ನವೆಂಬರ ೨೧, ೨೦೨೧ ರಂದು ನಡೆದಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ತಾನು ಕಸಾಪ ಆಜೀವ ಸದಸ್ಯರ ಹಾಗೂ ತಮ್ಮೆಲ್ಲರ ಪ್ರೀತಿ- ಸಹಕಾರದಿಂದ ಉತ್ತರ ಕನ್ನಡ ಜಿಲ್ಲಾ ಕಸಾಪ ಅಧ್ಯಕ್ಷನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಆ ಸಂಬoಧ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಹೊನ್ನಾವರ ತಾಲೂಕು ಘಟಕದ ಅಧ್ಯಕ್ಷರ ಆಯ್ಕೆಯ ಕುರಿತಂತೆ ಅಭಿಪ್ರಾಯ ಸಂಗ್ರಹಿಸಲು ಡಿಸೆಂಬರ ೧೦ (೧೦-೧೨-೨೧) ರಂದು ಮುಂಜಾನೆ ೧೦.೩೦ ಗಂಟೆಗೆ ಹೊನ್ನಾವರದ ಸೇಂಟ್ ಥಾಮಸ್ ಸ್ಕೂಲ್ ಸಭಾ ಭವನದಲ್ಲಿ ಸಮಾಲೋಚನಾ ಸಭೆ ನಡೆಯಲಿದೆ ಎಂದು ಉತ್ತರಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ.ಎನ್. ವಾಸರೆ ತಿಳಿಸಿದ್ದಾರೆ
ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆಯoತೆ ಈ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ಹೊನ್ನಾವರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲ ಆಜೀವ ಸದಸ್ಯರು ಪಾಲ್ಗೊಂಡು ಅಗತ್ಯ ಸಲಹೆ ಸೂಚನೆ ನೀಡುವಂತೆ ಅರಿಕೆ ಮಾಡಿಕೊಂಡಿದ್ದಾರೆ.
More Stories
ದಾಂಡೇಲಿಯಲ್ಲಿ ನಡೆದ ಮೊದಲ ಕನ್ನಡ ಸಾಹಿತ್ಯ ಸಮ್ಮೇಳನ
ಹಣತೆಯಿಂದ ಸಾರಾ ಅಬೂಬಕ್ಕರ್ಗೆ ಅರ್ಥಪೂರ್ಣ ಗೌರವ : ಡಾ: ತೃಪ್ತಿ ನಾಯಕ
ಜ. 8 : ‘ಹಣತೆ’ ದಾಂಡೇಲಿ ತಾಲೂಕು ಘಟಕದ ಉದ್ಘಾಟನೆ