ದಾಂಡೇಲಿ: ‘ಹಣತೆ’ ಸಾಹಿತ್ಯಕ, ಸಾಂಸ್ಕ÷್ಥತಿಕ ಜಗಲಿ ದಾಂಡೇಲಿ ಘಟಕದ ನೂತನ ಕಾರ್ಯಕಾರಿ ಸಮಿತಿ ಚಟುವಟಿಕೆಯ ಉದ್ಘಾಟನಾ ಸಮಾರಂಭ ಪಟ್ಟಣದ ಸಂತೋಷ್ ಹೊಟೆಲ್ ಸಭಾಭವನದಲ್ಲಿ ಜ.8 ಭಾನುವಾರ ಸಂಜೆ 5 ಗಂಟೆಗೆ ನಡೆಯಲಿದೆ.
‘ಹಣತೆ’ ಜಿಲ್ಲಾ ಸಮಿತಿ ಸದಸ್ಯ, ಕವಿ ಪ್ರೊ. ನಾಗರಾಜ ಹೆಗಡೆ ಅಪಗಾಲ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಹಣತೆ ಹೊನ್ನಾವರ ತಾಲೂಕು ಘಟಕದ ಅಧ್ಯಕ್ಷ ಪ್ರೊ. ಪ್ರಶಾಂತ ಹೆಗಡೆ ಮೂಡಲಮನೆ ಪಾಲ್ಗೊಳ್ಳಲಿದ್ದಾರೆ.
ಹಣತೆ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ಅಧ್ಯಕ್ಷತೆ ವಹಿಸಲಿದ್ದಾರೆ.
ಹಣತೆ ಜಿಲ್ಲಾ ಸಮಿತಿ ಪ್ರಧಾನ ಸಂಚಾಲಕ ಎನ್.ಜಯಚಂದ್ರನ್, ಸದಸ್ಯ ಪ್ರೊ. ಉಪೇಂದ್ರ ಘೋರ್ಪಡೆ, ಹಣತೆ ಹಳಿಯಾಳ ತಾಲೂಕು ಘಟಕದ ಅಧ್ಯಕ್ಷ ರಾಮಕೃಷ್ಣ ಗುನಗ, ಜೋಯಿಡಾ ಘಟಕದ ಅಧ್ಯಕ್ಷ ಎಂಟನಿ ಜಾನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಹಣತೆ ದಾಂಡೇಲಿ ಘಟಕದ ಅಧ್ಯಕ್ಷ ರಾಘವೇಂದ್ರ ಗಡೆಪ್ಪನವರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
ದಾಂಡೇಲಿಯಲ್ಲಿ ನಡೆದ ಮೊದಲ ಕನ್ನಡ ಸಾಹಿತ್ಯ ಸಮ್ಮೇಳನ
ಹಣತೆಯಿಂದ ಸಾರಾ ಅಬೂಬಕ್ಕರ್ಗೆ ಅರ್ಥಪೂರ್ಣ ಗೌರವ : ಡಾ: ತೃಪ್ತಿ ನಾಯಕ
ಬಸ್ ಸಮಸ್ಯೆಗಳ ಬಗ್ಗೆ ದಾಂಡೇಲಿ ಡಿಪೋ ಮ್ಯಾನೇಜರ್ ಜೊತೆ ಚರ್ಚೆ