ಹೊನ್ನಾವರ ; ಉತ್ತರ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ಕಡತೊಕಾದಲ್ಲಿ ಹಸಿರು ಪರಿಸರದ ಮದ್ಯೆ ಕಾಂಗ್ರೆಸ್ ನಾಯಕ ಸಂಸದ ರಾಹುಲ್ ಗಾಂಧಿ ಜನ್ಮ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿAದ ಆಚರಿಸಲಾಯಿತು.
ಕಿಸಾನ್ ಕಾಂಗ್ರೆಸನ ಹಲವು ಪದಾಧಿಕಾರಿಗಳು ಕಾರ್ಯಕರ್ತರು ಸೇರಿ ಹಲವು ರೈತರಿಗೆ ಬತ್ತದ ಬೀಜಗಳನ್ನು ಉಚಿತವಾಗಿ ವಿತರಿಸಿ ಕೇಕ್ ಕತ್ತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.
ಈ ವೇಳೆ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೆಗಡೆ ಕಡತೊಕಾ ಮಾತನಾಡಿ ಲೋಕಸಭಾ ಸದಸ್ಯ ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರು ಜನ ಮೆಚ್ಚಿದ ರಾಜಕಾರಣಿಯಾಗಿದ್ದು ನಿಸ್ವಾರ್ಥ ಮತ್ತು ಅವಿಶ್ರಾಂತ ಜನಸೇವೆಯಲ್ಲಿ ತೊಡಗಿಕೊಂಡಿದ್ದು ಜನಸಾಮಾನ್ಯರ ಜೊತೆ ಬೆರೆಯುತ್ತಿದ್ದಾರೆ. ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದಾರೆ. ಕಾಂಗ್ರೆಸ್ ಯಾವತ್ತೂ ಜನಪರ ಕಾರ್ಯಕ್ರಮಗಳನ್ನು ದೇಶಕ್ಕೆ ನೀಡಿದ್ದು ರಾಹುಲ್ ಗಾಂಧಿ ಪ್ರಧಾನಿಯಾದಲ್ಲಿ ದೇಶದ ಸರ್ವಾಂಗೀಣ ಪ್ರಗತಿ ಮತ್ತು ಜನ ಸಾಮಾನ್ಯರ ಹಿತ ಸಾಧ್ಯವಿದೆ ಕಾಂಗ್ರೆಸ್ ಎಂದಿಗೂ ರೈತ ಪರವಾಗಿದೆ. ಬಿಜೆಪಿ ಸರ್ಕಾರ ರೈತ ವಿರೋಧಿಯಾಗಿದ್ದು ರೈತ ವಿರೋಧಿ ಕರಾಳ ಶಾಸನಗಳನ್ನು ಜಾರಿಗೆ ತಂದು ರೈತರನ್ನು ಹಿಂಸಿಸುತ್ತಿದೆ ಎಂದರು. ಬಿಜೆಪಿಗರು ರಾಹುಲ್ ಹೆಸರು ಕೆಡಿಸಲು ನಿರಂತರ ಪ್ರಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಿಸಾನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ಕರ್ಕಿ ಮಾತನಾಡಿ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾAಧಿಯವರು ಭೂಸುಧಾರಣಾ ಕಾಯ್ದೆ ಜಾರಿಗೊಳಿಸಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಭೂಮಿ ಸಿಗುವಂತೆ ಮಾಡಿ ಕೋಟ್ಯಂತರ ಜನರಿಗೆ ಅನ್ನ ನೀಡಿದ ಮಹಾನ್ ನಾಯಕಿ. ಇವರ ಮೊಮ್ಮಗ ರಾಹುಲ್ ಗಾಂಧಿ ನಮ್ಮೆಲ್ಲರ ನಾಯಕರಾಗಿದ್ದು ನಮಗೆ ಹೆಮ್ಮೆ . ಅವರು ಮುಂದಿನ ಪ್ರಧಾನಿಯಾದರೆ ಮಾತ್ರ ಈ ದೇಶಕ್ಕೆ ಉತ್ತಮ ಭವಿಷ್ಯವಿದೆ ಎಂದರು.
ಕಿರಣ ಭಂಡಾರಿ ಕಡತೊಕ ಎಲ್ಲರನ್ನು ಸ್ವಾಗತಿಸಿದರು. ಸುಬ್ರಹ್ಮಣ್ಯ ಹೆಗಡೆ ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರನ್ನು ವಂದಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯೆ ರೂಪಾ ಗೌಡ. ಗ್ರಾಪಂ ಸದಸ್ಯರಾದ ರಾಮಚಂದ್ರ ನಾಯ್ಕ, ಗಿರೀಶ ಗೌಡ ಮತ್ತು ಶ್ರೀನಾಥ್ ಶೆಟ್ಟಿ , ನಾರಣಪ್ಪ ಗೌಡ, ಅರುಣ ನಾಯ್ಕ, ವಿನಾಯಕ ನಾಯ್ಕ, ಪಾಂಡು ಹರಿಕಾಂತ, ಎಲ್ ಎನ್ ಭಟ್ಟ, ಮಹೇಶ ಭಟ್ಟ, ಸುಬ್ರಾಯ ಗೌಡ ಮತ್ತು ಹಲವು ರೈತರು ಉಪಸ್ಥಿತರಿದ್ದರು.
More Stories
ಖಾಸಗಿ ಬಸ್ ಪಲ್ಟಿಯಾಗಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ, ೨ ಸಾವು
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ