ಹೊನ್ನಾವರ; ತಾಲೂಕಿನ ಸಾಲ್ಕೋಡ್ ಗ್ರಾಮ ಪಂಚಾಯತಿ ಆವರಣದಲ್ಲಿ ಕೃಷಿ ಹಾಗೂ ಕೃಷಿ ಸಂಭದಿತ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಕೃಷಿ ಅಭಿಯಾನ ಜಾಗೃತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ರಜನಿ ನಾಯ್ಕ ಚಾಲನೆ ನೀಡಿದರು.
ನಂತರ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿದ ಗ್ರಾ.ಪಂ.ಉಪಾಧ್ಯಕ್ಷ ಸಚೀನ ನಾಯ್ಕ ಮಾತನಾಡಿ ನಶಿಸುತ್ತಿರುವ ಕೃಷಿ ಚಟುವಟಿಕೆ ಪುನಶ್ಚೇತನ ನೀಡಲು ಇಲಾಖೆ ಅಭಿಯಾನದ ಮೂಲಕ ಜಾಗೃತಿ ಮೂಡಿಸುತ್ತಿದೆ. ಕೃಷಿ ಉಪಕರಣ ಮಾಹಿತಿ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ.
ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸೇರಿ ರೈತರಿಗೆ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡೋಣ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಧ್ಯಕ್ಷೆ ರಜನಿ ನಾಯ್ಕ ಮಾತನಾಡಿ ಈ ಅಭಿಯಾನದ ಮೂಲಕ ಸಮಗ್ರ ಕೃಷಿ ಮನೆ ಬಾಗಿಲಿಗೆ ಬಂದಿದೆ. ಈ ಕಾರ್ಯಕ್ರಮದ ಸದುಪಯೋಗ ರೈತರು ಪಡೆದುಕೊಳ್ಳುವಂತೆ ಕರೆ ನೀಡಿದರು.
ಸಹಾಯಕ ಕೃಷಿ ನಿರ್ದೇಶಕ ಜಯರಾಮ ಹೆಬ್ಬಾರ ಪ್ರಾಸ್ತವಿಕವಾಗಿ ಮಾತನಾಡಿ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಪಂಚಾಯತಿ ಅಭಿವೃದ್ದಿ ಅಧಿಕಾರಿ ಪ್ರಶಾಂತ ಶೆಟ್ಟಿ ಗ್ರಾಮ ಪಂಚಾಯತಿ ಸದಸ್ಯರಾದ ಬಾಲಚಂದ್ರ ನಾಯ್ಕ, ಗಣಪತಿ ಭಟ್, ಫಾರ್ತೂನ್ ಅಂತೂನ್ ಮೆಂಡಿಸ್, ಆಶಾ ಮಡಿವಾಳ, ಲಕ್ಷ್ಮಿ ಮುಕ್ರಿ, ಯಮುನಾ ನಾಯ್ಕ ಉಪಸ್ಥಿತರಿದ್ದರು. ಕೃಷಿ ಅಧಿಕಾರಿ ಲಕ್ಷ್ಮಿ ಎಸ್.ದಳವಾಯಿ ಸ್ವಾಗತಿಸಿ, ಪುನೀತಾ ಎಸ್.ಬಿ. ವಂದಿಸಿದರು.
More Stories
ಡಾ. ವಿಠ್ಠಲ ಭಂಡಾರಿಯವರ ನೆನಪಿನ ಮೂರನೇ ವರ್ಷ ಸಹಯಾನದ ಅಂಗಳದಲ್ಲಿ
ಪಿಎಸೈ ವಿರುದ್ದ ಇಲಾಖೆಯ ಮೇಲಾಧಿಕಾರಿಗೆ ಹಾಗೂ ಜನಪ್ರತಿನಿಧಿಗಳಿಗೆ ಗ್ರಾ.ಪಂ. ಸದಸ್ಯನಿಂದ ದೂರು,
ಅರಣ್ಯ ಇಲಾಖೆಯ ನಿರ್ಲಕ್ಷದಿಂದ ಮೂಕ ಕಾಡು ಪ್ರಾಣಿ ಸಾವು