April 24, 2024

Bhavana Tv

Its Your Channel

ನೀಲಗೋಡ ಯಕ್ಷಿ ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ

ಹೊನ್ನಾವರ: ತನ್ನ ಅಪಾರ ಮಹಿಮಾ ಶಕ್ತಿಯಿಂದ ರಾಜ್ಯ ಹೊರರಾಜ್ಯದ ಭಕ್ತರನ್ನು ಸೆಳೆದುಕೊಳ್ಳುತ್ತಿರುವ ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ನೀಲಗೋಡ ಯಕ್ಷಿ ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ನಿತ್ಯವು ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ.

ದೇವಸ್ಥಾನದ ಪ್ರಧಾನ ಅರ್ಚಕರು ಸಂಸ್ಥಾಪಕರು ಆದ ಶ್ರೀ ಮಾದೇವ ಸ್ವಾಮಿಯವರ ಮಾರ್ಗದರ್ಶನದಲ್ಲಿ ಮಂಗಳವಾರ ಕಾರ್ಯಕ್ರಮಗಳು ನಡೆದವು. ದೇವಿಗೆ ಮಹಾಪೂಜೆ, ತುಪ್ಪದ ದೀಪ ಸೇವೆ, ಉಡಿ ಸೇವೆ ಹಾಗೂ ವಿವಿಧ ಸೇವೆಗಳು ನಡೆದವು.
ಶೃಂಗೇರಿ ಜಗದ್ಗುರು ಶ್ರೀ ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಹಾಗೂ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ ಅನುಗ್ರಹಗಳದೊಂದಿಗೆ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ.

ಈ ಕುರಿತು ಭಾವನಾ ಟಿವಿಯೊಂದಿಗೆ ಮಾತನಾಡಿದ ಶ್ರೀ ಮಾದೇವ ಸ್ವಾಮಿಯವರು ನೀಲಗೋಡ ಯಕ್ಷಿಚೌಡೇಶ್ವರಿಯವರು ದೇವಸ್ಥಾನದ ನವರಾತ್ರಿ ಉತ್ಸವದ ಕುರಿತು ವಿವರಣೆ ನೀಡಿದರು.

ಭಾವನಾ ಟಿವಿಗಾಗಿ ವೆಂಕಟೇಶ ಮೇಸ್ತ ಹೊನ್ನಾವರ

error: