March 29, 2024

Bhavana Tv

Its Your Channel

ಗ್ರಾಮ ಪಂಚಾಯತ ದೂರದೃಷ್ಠಿ ಯೋಜನೆ ತಯಾರಿಕೆ ಸಿದ್ಧತಾ ಕಾರ್ಯಾಗಾರ

ಹೊನ್ನಾವರ: ತಾಲೂಕಾ ಪಂಚಾಯತ ಸಭಾಭವನದಲ್ಲಿ ತಾಲೂಕಿನ ಗ್ರಾಮ ಪಂಚಾಯತಗಳ ದೂರದೃಷ್ಠಿ ಯೋಜನೆ ತಯಾರಿಕೆ ಕುರಿತು ತಾಲೂಕಾ ಮಟ್ಟದ ಅಧಿಕಾರಿಗಳು ಗ್ರಾಮ ಪಂಚಾಯತ ಅಧ್ಯಕ್ಷರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕಾ ಪಂಚಾಯತ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿಗಳಾದ ವಿನೋದ ಜಿ. ಅಣ್ವೇಕರರವರು ಉಪಸ್ಥಿತರಿದ್ದು, ತರಬೇತಿಯ ಮಹತ್ವ ದೂರದೃಷ್ಠಿ ಯೋಜನೆಯಲ್ಲಿ ವಾಸ್ತವ್ಯ ಅಂಕಿ-ಅAಶಗಳ ಮಹತ್ವದ ಬಗ್ಗೆ ತಿಳಿಸಿದರು.

ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುರೇಶ ನಾಯ್ಕ ರವರು ದೂರದೃಷ್ಠಿ ಯೋಜನೆ ಉದ್ದೇಶಗಳ ಬಗ್ಗೆ ನೂತನ ಗ್ರಾಮ ಪಂಚಾಯತ ಅಧ್ಯಕ್ಷರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ವಿವರಿಸಿದರು.

ತರಬೇತಿಯ ಸಂಪನ್ಮೂಲ ವ್ಯಕ್ತಿಗಳಾಗಿ ಕೃಷ್ಣಾನಂದ ಕೆ, ಸಹಾಯಕ ನಿರ್ದೇಶಕರು (ಗ್ರಾ.ಉ.) ಮತ್ತು ಕಿರಣಕುಮಾರ ಎಂ.ಜಿ., ಪಂಚಾಯತ ಅಭಿವೃದ್ಧಿ ಅಧಿಕಾರಿರವರು ಸದರಿ ಯೋಜನೆಯ ಅನುಷ್ಠಾನದ ವಿವಿಧ ಹಂತಗಳಲ್ಲಿ ಮತ್ತು ಯೋಜನೆ ತಯಾರಿಕೆ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು. ಗ್ರಾಮ ಪಂಚಾಯತ ಅಧ್ಯಕ್ಷರು ತರಬೇತಿಯ ಕುರಿತು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.

error: