ಹೊನ್ನಾವರ ತಾಲ್ಲೂಕಿನ ಅತ್ಯಂತ ಪ್ರಸಿದ್ಧಿ ಪಡೆದಿರುವ ಉಪ್ಪೋಣಿಯಲ್ಲಿರುವ ಶ್ರೀ ಚಾಮುಂಡೇಶ್ವರಿ ಮತ್ತು ಪರಿವಾರ ದೇವಸ್ಥಾನದಲ್ಲಿ ಪೌರ್ಣಿಮೆಯ ನಿಮಿತ್ತ ಲೋಕ ಕಲ್ಯಾಣಾರ್ಥ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನಡೆಯಿತು.
ಶ್ರೀ ರಾಮ ಕ್ಷೇತ್ರ ಉಜಿರೆಯ ಪೀಠಾಧೀಶರಾದ ಶ್ರೀ ಶ್ರೀ ಬ್ರಹ್ಮಾನಂದ ಸತಸ್ವತಿ ಸ್ವಾಮಾಜೀಯವರ ದಿವ್ಯ ಆಶೀರ್ವಾದಗಳೊಂದಿಗೆ ಪ್ರಧಾನ ಅರ್ಚಕ ರವಿ ನಾಯ್ಕರವರ ಮಾರ್ಗದರ್ಶನದಲ್ಲಿ ನಡೆಯಿತು.
ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಿತ್ಯವು ತ್ರಿಕಾಲ ಪೂಜೆ ಹಾಗೂ ಮಂಗಳವಾರ ಹಾಗೂ ಶುಕ್ರವಾರ ವಿಶೇಷವಾಗಿ ದೇವಿಯ ದರ್ಶನ ನಡೆಯುತ್ತದೆ.
ಬುಧವಾರ ಹುಣ್ಣಿಮೆಯ ನಿಮಿತ್ತ ದೇವಿಯ ಅಪ್ಪಣೆಯಂತೆ ಸಾಮೂಹಿಕ ಸತ್ಯ ನಾರಾಯಣ ವೃತ ಪೂಜೆ , ಮಹಾಮಂಗಳಾರತಿ ಹಾಗೂ ಅನ್ನ ಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಭಾವನಾ ಟಿವಿಯೊಂದಿಗೆ ಮಾತನಾಡಿದ ರವಿ ನಾಯ್ಕರವರು ದೇವಿಯ ಮಹತ್ವ ಹಾಗೂ ಸಾಮೂಹಿಕ ಸತ್ಯ ನಾರಾಯಣ ಪೂಜೆಯ ಕುರಿತು ವಿವರಿಸಿದರು.
ವೇದಮೂರ್ತಿ ಗಣೇಶ ರವರು ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ನಡೆಯುವ ಕಾರ್ಯಗಳ ಕುರಿತು ಮಾತನಾಡಿದರು.
ಕಳೆದ ಕೆಲವು ದಿನಗಳ ಹಿಂದೆ ವಿಜಯ ದಶಮಿ ನಿಮಿತ್ತ ಸಹಸ್ರ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆದಿದ್ದು ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
ಭಾವನಾ ಟಿವಿಗಾಗಿ ವೆಂಕಟೇಶ ಮೇಸ್ತ ಹೊನ್ನಾವರ.
More Stories
ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಕೂಜಳ್ಳಿಯ ಹಿರಿಯ ಜೀವ ಅನಸೂಯಾ ಹೆಗಡೆ,
ಡಾ. ವಿಠ್ಠಲ ಭಂಡಾರಿಯವರ ನೆನಪಿನ ಮೂರನೇ ವರ್ಷ ಸಹಯಾನದ ಅಂಗಳದಲ್ಲಿ
ಪಿಎಸೈ ವಿರುದ್ದ ಇಲಾಖೆಯ ಮೇಲಾಧಿಕಾರಿಗೆ ಹಾಗೂ ಜನಪ್ರತಿನಿಧಿಗಳಿಗೆ ಗ್ರಾ.ಪಂ. ಸದಸ್ಯನಿಂದ ದೂರು,